ಆರೋಗ್ಯ

ಭಾರತದಲ್ಲಿ 100 ಮಿಲಿಯನ್ ಮಧುಮೇಹಿಗಳು…! | ಐಸಿಎಂಆರ್ ಅಧ್ಯಯನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚಿನ ದಿನಗಳಲ್ಲಿ ಆರೋಗ್ಯ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿದೆ. ಪ್ರತಿ ಮನೆ ಮನೆಯಲ್ಲೂ ರೋಗಿಗಳಿದ್ದಾರೆ. ಅದರಲ್ಲೂ ಬಿಪಿ, ಸಕ್ಕರೆ ಖಾಯಿಲೆಯವರಂತೂ ಮಾಮೂಲು. ಅತೀ ಸಣ್ಣ ವಯಸ್ಸಿನ ಮಕ್ಕಳನ್ನು ಬಿಡುತ್ತಿಲ್ಲ ಈ ಡಯಾಬಿಟೀಸ್. ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಸಹಯೋಗದ‍ಲ್ಲಿ ನಡೆಸಲಾದ ಅಧ್ಯಯನವು ಭಾರತ ದೇಶದಲ್ಲಿ ಇರುವ ಡಯಾಬಿಟಿಸ್ ರೋಗಿಗಳ ಬಗ್ಗೆ ಅಂಕಿ ಅಂಶಗಳನ್ನು ಹೊರಹಾಕಿದೆ. 

Advertisement

ಭಾರತ ದೇಶದಲ್ಲಿ 101.3 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 11.4% ಜನರು ಮಧುಮೇಹವನ್ನು ಹೊಂದಿರುತ್ತಾರೆ ಎಂದು ಅಂದಾಜಿಸಿದೆ. ಭಾರತದಲ್ಲಿ 136 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 15.3% ಜನರು ಪೂರ್ವ-ಮಧುಮೇಹ (ಪ್ರೀ-ಡಯಾಬಿಟೀಸ್‌) ಹೊಂದಿರಬಹುದು ಎಂದು ಅಧ್ಯಯನ ಬಹಿರಂಗಪಡಿಸಿದೆ.

ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ ಪೂರ್ವ ಮಧುಮೇಹ ಎಂದು ಕರೆಯಲಾಗುತ್ತದೆ. ಆದರೆ ಮಧುಮೇಹ ಎಂದು ವರ್ಗೀಕರಿಸಲು ಇಷ್ಟು ಸಾಕಾಗುವುದಿಲ್ಲ. ‘ದಿ ಲ್ಯಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ ಮೆಡಿಕಲ್ ಜರ್ನಲ್‌’ನಲ್ಲಿ ಪ್ರಕಟವಾದ ಈ ಅಧ್ಯಯನವು, “ಭಾರತದಲ್ಲಿ ಚಯಾಪಚಯ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹರಡುವಿಕೆ”ಯನ್ನು ಪ್ರಮಾಣೀಕರಿಸಲು ಪ್ರಯತ್ನಿಸಿದೆ.

 

‘ಮೋಹನ್ ಮಧುಮೇಹ ಸ್ಪೆಷಾಲಿಟೀಸ್ ಸೆಂಟರ್‌’ನ ಅಧ್ಯಯನದ ಮುಖ್ಯ ಲೇಖಕಿ, ವ್ಯವಸ್ಥಾಪಕ ನಿರ್ದೇಶಕಿ ಎಂ.ಅಂಜನಾ ಅವರು ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಮಧುಮೇಹದ ಹರಡುವಿಕೆ ಕಡಿಮೆ ಇರುವ ರಾಜ್ಯಗಳಲ್ಲಿ ಪ್ರಿ-ಡಯಾಬಿಟಿಸ್ ಮಟ್ಟಗಳು ಹೆಚ್ಚಿವೆ” ಎಂದಿರುವುದಾಗಿ  ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಪೂರ್ವ-ಮಧುಮೇಹ ಇದ್ದರೆ, ಅದು ಮಧುಮೇಹಕ್ಕೆ ಅತ್ಯಂತ ವೇಗವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುತ್ತದೆ. ಪೂರ್ವ ಮಧುಮೇಹ ಹೊಂದಿರುವ 60% ಕ್ಕಿಂತ ಹೆಚ್ಚು ಜನರು ಮುಂದಿನ ಐದು ವರ್ಷಗಳಲ್ಲಿ ಮಧುಮೇಹಿಗಳಾಗುತ್ತಾರೆ” ಎಂದಿದ್ದಾರೆ ಅಂಜಲಿ.

ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ 39.5% ಜನರು ಹೊಟ್ಟೆಯ ಬೊಜ್ಜು ಹೊಂದಿದ್ದರೆ, 28.6% ಸಾಮಾನ್ಯ ಬೊಜ್ಜು ಹೊಂದಿದ್ದರು ಎಂದು ಸಂಶೋಧನೆ ಹೇಳಿದೆ. ಅಧ್ಯಯನ ಮಾಡಿದವರಲ್ಲಿ 81.2% ರಷ್ಟು ಕೊಲೆಸ್ಟ್ರಾಲ್, ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್ ಮತ್ತು ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನಂತಹ ಅಸಮತೋಲನವನ್ನು ಹೊಂದಿದ್ದಾರೆ ಎಂದಿದೆ. ಈ ಅಧ್ಯಯನವು 2008 ಮತ್ತು 2020ರ ನಡುವೆ ನಡೆದಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,13,043 ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

8 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

9 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

16 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

22 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

22 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

22 hours ago