Advertisement
ಆರೋಗ್ಯ

ಭಾರತದಲ್ಲಿ 100 ಮಿಲಿಯನ್ ಮಧುಮೇಹಿಗಳು…! | ಐಸಿಎಂಆರ್ ಅಧ್ಯಯನ

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿದೆ. ಪ್ರತಿ ಮನೆ ಮನೆಯಲ್ಲೂ ರೋಗಿಗಳಿದ್ದಾರೆ. ಅದರಲ್ಲೂ ಬಿಪಿ, ಸಕ್ಕರೆ ಖಾಯಿಲೆಯವರಂತೂ ಮಾಮೂಲು. ಅತೀ ಸಣ್ಣ ವಯಸ್ಸಿನ ಮಕ್ಕಳನ್ನು ಬಿಡುತ್ತಿಲ್ಲ ಈ ಡಯಾಬಿಟೀಸ್. ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಸಹಯೋಗದ‍ಲ್ಲಿ ನಡೆಸಲಾದ ಅಧ್ಯಯನವು ಭಾರತ ದೇಶದಲ್ಲಿ ಇರುವ ಡಯಾಬಿಟಿಸ್ ರೋಗಿಗಳ ಬಗ್ಗೆ ಅಂಕಿ ಅಂಶಗಳನ್ನು ಹೊರಹಾಕಿದೆ. 

ಭಾರತ ದೇಶದಲ್ಲಿ 101.3 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 11.4% ಜನರು ಮಧುಮೇಹವನ್ನು ಹೊಂದಿರುತ್ತಾರೆ ಎಂದು ಅಂದಾಜಿಸಿದೆ. ಭಾರತದಲ್ಲಿ 136 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 15.3% ಜನರು ಪೂರ್ವ-ಮಧುಮೇಹ (ಪ್ರೀ-ಡಯಾಬಿಟೀಸ್‌) ಹೊಂದಿರಬಹುದು ಎಂದು ಅಧ್ಯಯನ ಬಹಿರಂಗಪಡಿಸಿದೆ.

ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ ಪೂರ್ವ ಮಧುಮೇಹ ಎಂದು ಕರೆಯಲಾಗುತ್ತದೆ. ಆದರೆ ಮಧುಮೇಹ ಎಂದು ವರ್ಗೀಕರಿಸಲು ಇಷ್ಟು ಸಾಕಾಗುವುದಿಲ್ಲ. ‘ದಿ ಲ್ಯಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ ಮೆಡಿಕಲ್ ಜರ್ನಲ್‌’ನಲ್ಲಿ ಪ್ರಕಟವಾದ ಈ ಅಧ್ಯಯನವು, “ಭಾರತದಲ್ಲಿ ಚಯಾಪಚಯ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹರಡುವಿಕೆ”ಯನ್ನು ಪ್ರಮಾಣೀಕರಿಸಲು ಪ್ರಯತ್ನಿಸಿದೆ.

 

‘ಮೋಹನ್ ಮಧುಮೇಹ ಸ್ಪೆಷಾಲಿಟೀಸ್ ಸೆಂಟರ್‌’ನ ಅಧ್ಯಯನದ ಮುಖ್ಯ ಲೇಖಕಿ, ವ್ಯವಸ್ಥಾಪಕ ನಿರ್ದೇಶಕಿ ಎಂ.ಅಂಜನಾ ಅವರು ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಮಧುಮೇಹದ ಹರಡುವಿಕೆ ಕಡಿಮೆ ಇರುವ ರಾಜ್ಯಗಳಲ್ಲಿ ಪ್ರಿ-ಡಯಾಬಿಟಿಸ್ ಮಟ್ಟಗಳು ಹೆಚ್ಚಿವೆ” ಎಂದಿರುವುದಾಗಿ  ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಪೂರ್ವ-ಮಧುಮೇಹ ಇದ್ದರೆ, ಅದು ಮಧುಮೇಹಕ್ಕೆ ಅತ್ಯಂತ ವೇಗವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುತ್ತದೆ. ಪೂರ್ವ ಮಧುಮೇಹ ಹೊಂದಿರುವ 60% ಕ್ಕಿಂತ ಹೆಚ್ಚು ಜನರು ಮುಂದಿನ ಐದು ವರ್ಷಗಳಲ್ಲಿ ಮಧುಮೇಹಿಗಳಾಗುತ್ತಾರೆ” ಎಂದಿದ್ದಾರೆ ಅಂಜಲಿ.

ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ 39.5% ಜನರು ಹೊಟ್ಟೆಯ ಬೊಜ್ಜು ಹೊಂದಿದ್ದರೆ, 28.6% ಸಾಮಾನ್ಯ ಬೊಜ್ಜು ಹೊಂದಿದ್ದರು ಎಂದು ಸಂಶೋಧನೆ ಹೇಳಿದೆ. ಅಧ್ಯಯನ ಮಾಡಿದವರಲ್ಲಿ 81.2% ರಷ್ಟು ಕೊಲೆಸ್ಟ್ರಾಲ್, ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್ ಮತ್ತು ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನಂತಹ ಅಸಮತೋಲನವನ್ನು ಹೊಂದಿದ್ದಾರೆ ಎಂದಿದೆ. ಈ ಅಧ್ಯಯನವು 2008 ಮತ್ತು 2020ರ ನಡುವೆ ನಡೆದಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,13,043 ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

29 minutes ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

20 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago