Advertisement
ಆರೋಗ್ಯ

ಭಾರತದಲ್ಲಿ 100 ಮಿಲಿಯನ್ ಮಧುಮೇಹಿಗಳು…! | ಐಸಿಎಂಆರ್ ಅಧ್ಯಯನ

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯ ರಕ್ಷಣೆಯೇ ದೊಡ್ಡ ಸಮಸ್ಯೆಯಾಗಿದೆ. ಪ್ರತಿ ಮನೆ ಮನೆಯಲ್ಲೂ ರೋಗಿಗಳಿದ್ದಾರೆ. ಅದರಲ್ಲೂ ಬಿಪಿ, ಸಕ್ಕರೆ ಖಾಯಿಲೆಯವರಂತೂ ಮಾಮೂಲು. ಅತೀ ಸಣ್ಣ ವಯಸ್ಸಿನ ಮಕ್ಕಳನ್ನು ಬಿಡುತ್ತಿಲ್ಲ ಈ ಡಯಾಬಿಟೀಸ್. ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್‌) ಸಹಯೋಗದ‍ಲ್ಲಿ ನಡೆಸಲಾದ ಅಧ್ಯಯನವು ಭಾರತ ದೇಶದಲ್ಲಿ ಇರುವ ಡಯಾಬಿಟಿಸ್ ರೋಗಿಗಳ ಬಗ್ಗೆ ಅಂಕಿ ಅಂಶಗಳನ್ನು ಹೊರಹಾಕಿದೆ. 

ಭಾರತ ದೇಶದಲ್ಲಿ 101.3 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 11.4% ಜನರು ಮಧುಮೇಹವನ್ನು ಹೊಂದಿರುತ್ತಾರೆ ಎಂದು ಅಂದಾಜಿಸಿದೆ. ಭಾರತದಲ್ಲಿ 136 ಮಿಲಿಯನ್ ಜನರು ಅಥವಾ ಜನಸಂಖ್ಯೆಯ 15.3% ಜನರು ಪೂರ್ವ-ಮಧುಮೇಹ (ಪ್ರೀ-ಡಯಾಬಿಟೀಸ್‌) ಹೊಂದಿರಬಹುದು ಎಂದು ಅಧ್ಯಯನ ಬಹಿರಂಗಪಡಿಸಿದೆ.

ವ್ಯಕ್ತಿಯ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದರೆ ಪೂರ್ವ ಮಧುಮೇಹ ಎಂದು ಕರೆಯಲಾಗುತ್ತದೆ. ಆದರೆ ಮಧುಮೇಹ ಎಂದು ವರ್ಗೀಕರಿಸಲು ಇಷ್ಟು ಸಾಕಾಗುವುದಿಲ್ಲ. ‘ದಿ ಲ್ಯಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ ಮೆಡಿಕಲ್ ಜರ್ನಲ್‌’ನಲ್ಲಿ ಪ್ರಕಟವಾದ ಈ ಅಧ್ಯಯನವು, “ಭಾರತದಲ್ಲಿ ಚಯಾಪಚಯ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಹರಡುವಿಕೆ”ಯನ್ನು ಪ್ರಮಾಣೀಕರಿಸಲು ಪ್ರಯತ್ನಿಸಿದೆ.

 

‘ಮೋಹನ್ ಮಧುಮೇಹ ಸ್ಪೆಷಾಲಿಟೀಸ್ ಸೆಂಟರ್‌’ನ ಅಧ್ಯಯನದ ಮುಖ್ಯ ಲೇಖಕಿ, ವ್ಯವಸ್ಥಾಪಕ ನಿರ್ದೇಶಕಿ ಎಂ.ಅಂಜನಾ ಅವರು ಪ್ರತಿಕ್ರಿಯಿಸಿದ್ದು, “ಪ್ರಸ್ತುತ ಮಧುಮೇಹದ ಹರಡುವಿಕೆ ಕಡಿಮೆ ಇರುವ ರಾಜ್ಯಗಳಲ್ಲಿ ಪ್ರಿ-ಡಯಾಬಿಟಿಸ್ ಮಟ್ಟಗಳು ಹೆಚ್ಚಿವೆ” ಎಂದಿರುವುದಾಗಿ  ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಪೂರ್ವ-ಮಧುಮೇಹ ಇದ್ದರೆ, ಅದು ಮಧುಮೇಹಕ್ಕೆ ಅತ್ಯಂತ ವೇಗವಾಗಿ ಪರಿವರ್ತನೆಯಾಗುವ ಸಾಧ್ಯತೆ ಇರುತ್ತದೆ. ಪೂರ್ವ ಮಧುಮೇಹ ಹೊಂದಿರುವ 60% ಕ್ಕಿಂತ ಹೆಚ್ಚು ಜನರು ಮುಂದಿನ ಐದು ವರ್ಷಗಳಲ್ಲಿ ಮಧುಮೇಹಿಗಳಾಗುತ್ತಾರೆ” ಎಂದಿದ್ದಾರೆ ಅಂಜಲಿ.

ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ 39.5% ಜನರು ಹೊಟ್ಟೆಯ ಬೊಜ್ಜು ಹೊಂದಿದ್ದರೆ, 28.6% ಸಾಮಾನ್ಯ ಬೊಜ್ಜು ಹೊಂದಿದ್ದರು ಎಂದು ಸಂಶೋಧನೆ ಹೇಳಿದೆ. ಅಧ್ಯಯನ ಮಾಡಿದವರಲ್ಲಿ 81.2% ರಷ್ಟು ಕೊಲೆಸ್ಟ್ರಾಲ್, ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ ಕೊಲೆಸ್ಟ್ರಾಲ್ ಮತ್ತು ಹೆಚ್ಚಿನ ಸಾಂದ್ರತೆಯ ಲಿಪೊಪ್ರೋಟೀನ್‌ನಂತಹ ಅಸಮತೋಲನವನ್ನು ಹೊಂದಿದ್ದಾರೆ ಎಂದಿದೆ. ಈ ಅಧ್ಯಯನವು 2008 ಮತ್ತು 2020ರ ನಡುವೆ ನಡೆದಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,13,043 ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

9 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

22 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

22 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago