ಭಾರತ ದಿನದಿಂದ ದಿನಕ್ಕೆ ಜಾಗತೀಕವಾಗಿ ಉತ್ತುಂಗಕ್ಕೆ ಏರುತ್ತಿದ್ರೆ, ನಮ್ಮ ಶತ್ರು ದೇಶ ಪಾಕಿಸ್ತಾನ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಬಗ್ಗೆ ಸ್ವತಃ ಪಾಕಿಸ್ಥಾನದ ಮಂದಿಯೇ ಬೇಸರಿಸಿಕೊಂಡಿದ್ದಾರೆ. ಈಗ ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ.
ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.
ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.
Source : Digital Media
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…