Advertisement
ಪ್ರಮುಖ

ಭಾರತ ಚಂದ್ರನನ್ನು ತಲುಪಿದೆ | ಪಾಕಿಸ್ತಾನ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ | ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್

Share

ಭಾರತ ದಿನದಿಂದ ದಿನಕ್ಕೆ ಜಾಗತೀಕವಾಗಿ ಉತ್ತುಂಗಕ್ಕೆ ಏರುತ್ತಿದ್ರೆ, ನಮ್ಮ ಶತ್ರು ದೇಶ ಪಾಕಿಸ್ತಾನ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಬಗ್ಗೆ ಸ್ವತಃ ಪಾಕಿಸ್ಥಾನದ ಮಂದಿಯೇ ಬೇಸರಿಸಿಕೊಂಡಿದ್ದಾರೆ. ಈಗ ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ.

ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್‍ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್‍ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.

ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

3 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

12 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

12 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

14 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 hours ago