ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

July 4, 2025
7:36 AM

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಈ ವಲಯವನ್ನು ಇನ್ನಷ್ಟು ಬಲಪಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು  ನೀತಿ ಆಯೋಗದ  ಕಾರ್ಯ ನಿರ್ವಹಣಾಧಿಕಾರಿ  ಬಿ.ವಿ.ಆರ್. ಸುಬ್ರಹ್ಮಣ್ಯಂ ದೆಹಲಿಯಲ್ಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರವಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ವಲಯ. ಸಾವಯವ ಮತ್ತು ಅ ಜೈವಿಕ ಎರಡೂ ರಾಸಾಯನಿಕಗಳು ಇಲ್ಲಿ ಉತ್ಪಾದನೆಯಾಗುತ್ತಿವೆ ಎಂದರು. ಜಾಗತಿಕ ರಾಸಾಯನಿಕ ಉದ್ಯಮವು ಪ್ರಮುಖ ಪರಿವರ್ತನೆಗೆ ಒಳಗಾಗುತ್ತಿದೆ. ಜಾಗತಿಕ ರಾಸಾಯನಿಕ ಮೌಲ್ಯ ಸರಪಳಿಗಳಲ್ಲಿ ಭಾರತದ ಶೇಕಡಾ 3.5 ರಷ್ಟು ಪಾಲನ್ನು ನೀಡುತ್ತಿದ್ದರೂ ಕೆಲವೊಂದು ಸಮಸ್ಯೆಗಳನ್ನು ಈ ವಲಯವು ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಪೂರೈಕೆ ಸರಪಳಿಗಳನ್ನು ಬದಲಾಯಿಸುವುದು, ಹಸಿರು ರಾಸಾಯನಿಕಗಳಿಗೆ ಬೇಡಿಕೆ ಒದಗಿಸುವುದು ಮತ್ತು  ಸುಸ್ಥಿರತೆಯ ಮೇಲೆ ಹೆಚ್ಚಿನ ಗಮನ ಹರಿಸುವತ್ತ ಚಿತ್ತ ಹರಿಸಲಾಗಿದೆ ಎಂದರು. ಈ ಸುಧಾರಣೆಗಳಿಂದ ಭಾರತವು 2030 ರ ವೇಳೆಗೆ ಜಾಗತಿಕ ರಾಸಾಯನಿಕ ಮೌಲ್ಯ ಸರಪಳಿಯಲ್ಲಿ ಶೇಕಡಾ 5 ರಿಂದ 6 ರಷ್ಟು ಪಾಲನ್ನು ಹೊಂದಿರುವ ಜಾಗತಿಕ ರಾಸಾಯನಿಕ ಉತ್ಪಾದನಾ ಶಕ್ತಿ ಕೇಂದ್ರವಾಗಲಿದೆ ಎಂದರು. ಇದೇ ಮುಂದುವರೆದರೆ 2040 ರ ವೇಳೆಗೆ ಭಾರತವು 1 ಟ್ರಿಲಿಯನ್ ಡಾಲರ್‌ ರಾಸಾಯನಿಕ ವಲಯವನ್ನು ತಲುಪುವ ಮತ್ತು ಶೇಕಡಾ 12 ರಷ್ಟು ಜಾಗತಿಕ ಮೌಲ್ಯ ಸರಪಳಿ  ಪಾಲನ್ನು ಸಾಧಿಸುವ ನಿರೀಕ್ಷೆ ಇದೆ  ಅಲ್ಲದೆ, 7 ಲಕ್ಷ ಹೆಚ್ಚುವರಿ ಉದ್ಯೋಗ ಕೂಡಾ ಸೃಷ್ಟಿಯಾಗಲಿದೆ ಎಂದು ಸುಬ್ರಹ್ಮಣ್ಯಂ ತಿಳಿಸಿದರು.

NITI Aayog released its report “Chemical Industry: Powering India’s Participation in Global Value Chains”. This report offers an extensive analysis of India’s chemical sector, highlighting both opportunities and challenges, and outlining a pathway for positioning India as a key player in global chemical markets.  India’s 3.5% share in global chemical value chains and its chemical trade deficit at USD 31 billion in 2023, underscores its high dependence on imported feedstock and specialty chemicals.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror