Advertisement
MIRROR FOCUS

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

Share

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಈ ವಲಯವನ್ನು ಇನ್ನಷ್ಟು ಬಲಪಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು  ನೀತಿ ಆಯೋಗದ  ಕಾರ್ಯ ನಿರ್ವಹಣಾಧಿಕಾರಿ  ಬಿ.ವಿ.ಆರ್. ಸುಬ್ರಹ್ಮಣ್ಯಂ ದೆಹಲಿಯಲ್ಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರವಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ವಲಯ. ಸಾವಯವ ಮತ್ತು ಅ ಜೈವಿಕ ಎರಡೂ ರಾಸಾಯನಿಕಗಳು ಇಲ್ಲಿ ಉತ್ಪಾದನೆಯಾಗುತ್ತಿವೆ ಎಂದರು. ಜಾಗತಿಕ ರಾಸಾಯನಿಕ ಉದ್ಯಮವು ಪ್ರಮುಖ ಪರಿವರ್ತನೆಗೆ ಒಳಗಾಗುತ್ತಿದೆ. ಜಾಗತಿಕ ರಾಸಾಯನಿಕ ಮೌಲ್ಯ ಸರಪಳಿಗಳಲ್ಲಿ ಭಾರತದ ಶೇಕಡಾ 3.5 ರಷ್ಟು ಪಾಲನ್ನು ನೀಡುತ್ತಿದ್ದರೂ ಕೆಲವೊಂದು ಸಮಸ್ಯೆಗಳನ್ನು ಈ ವಲಯವು ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಪೂರೈಕೆ ಸರಪಳಿಗಳನ್ನು ಬದಲಾಯಿಸುವುದು, ಹಸಿರು ರಾಸಾಯನಿಕಗಳಿಗೆ ಬೇಡಿಕೆ ಒದಗಿಸುವುದು ಮತ್ತು  ಸುಸ್ಥಿರತೆಯ ಮೇಲೆ ಹೆಚ್ಚಿನ ಗಮನ ಹರಿಸುವತ್ತ ಚಿತ್ತ ಹರಿಸಲಾಗಿದೆ ಎಂದರು. ಈ ಸುಧಾರಣೆಗಳಿಂದ ಭಾರತವು 2030 ರ ವೇಳೆಗೆ ಜಾಗತಿಕ ರಾಸಾಯನಿಕ ಮೌಲ್ಯ ಸರಪಳಿಯಲ್ಲಿ ಶೇಕಡಾ 5 ರಿಂದ 6 ರಷ್ಟು ಪಾಲನ್ನು ಹೊಂದಿರುವ ಜಾಗತಿಕ ರಾಸಾಯನಿಕ ಉತ್ಪಾದನಾ ಶಕ್ತಿ ಕೇಂದ್ರವಾಗಲಿದೆ ಎಂದರು. ಇದೇ ಮುಂದುವರೆದರೆ 2040 ರ ವೇಳೆಗೆ ಭಾರತವು 1 ಟ್ರಿಲಿಯನ್ ಡಾಲರ್‌ ರಾಸಾಯನಿಕ ವಲಯವನ್ನು ತಲುಪುವ ಮತ್ತು ಶೇಕಡಾ 12 ರಷ್ಟು ಜಾಗತಿಕ ಮೌಲ್ಯ ಸರಪಳಿ  ಪಾಲನ್ನು ಸಾಧಿಸುವ ನಿರೀಕ್ಷೆ ಇದೆ  ಅಲ್ಲದೆ, 7 ಲಕ್ಷ ಹೆಚ್ಚುವರಿ ಉದ್ಯೋಗ ಕೂಡಾ ಸೃಷ್ಟಿಯಾಗಲಿದೆ ಎಂದು ಸುಬ್ರಹ್ಮಣ್ಯಂ ತಿಳಿಸಿದರು.

NITI Aayog released its report “Chemical Industry: Powering India’s Participation in Global Value Chains”. This report offers an extensive analysis of India’s chemical sector, highlighting both opportunities and challenges, and outlining a pathway for positioning India as a key player in global chemical markets.  India’s 3.5% share in global chemical value chains and its chemical trade deficit at USD 31 billion in 2023, underscores its high dependence on imported feedstock and specialty chemicals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

14 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

14 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

19 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

19 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

19 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago