ಸುದ್ದಿಗಳು

ಭಾರತ ಅಮೇರಿಕಾಗೆ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೇರಿಕಾ ವಿತ್ತ ಸಚಿವೆ: ಇಂಡೋ-ಅಮೇರಿಕಾ ಸಂಬಂಧ ಮತ್ತಷ್ಟು ವೃದ್ಧಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತವನ್ನು ಅಮೇರಿಕಾದ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಅಮೇರಿಕಾ ವಿತ್ತ ಸಚಿವೆ ಹೇಳಿದ್ದಾರೆ ಇದೇ ವೇಳೆ ಫ್ರೆಂಡ್ ಶೋರಿಂಗ್ ಬಗ್ಗೆನು ಅವರು ಪ್ರಸ್ತಾಪಿಸಿದ್ದಾರೆ. ಪೂರೈಕೆ ಸರಪಳಿ (ಸಪ್ಲೈ ಚೈನ್) ನ್ನು ಬಲಪಡಿಸುವ ನಿಟ್ಟಿನಲ್ಲಿ ಫ್ರೆಂಡ್ ಶೋರಿಂಗ್ ಬಹಳ ಸಹಕಾರಿಯಾಗಲಿದೆ. ಅಮೇರಿಕ ಅಧ್ಯಕ್ಷ ಜೋ ಬೈಡನ್ ಕೂಡ ಈ ಹಿಂದೆ ಭಾರತವನ್ನು ಅವಿಭಾಜ್ಯ ಪಾಲುದಾರ ರಾಷ್ಟ್ರ ಎಂದು ಹೇಳಿದ್ದರು.

Advertisement

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಿ-20 ಹಣಕಾಸು ಸಚಿವರು ಹಾಗೂ ಕೇಂದ್ರ ಬ್ಯಾಂಕ್ ಗೌರ್ನರ್ ಗಳ ಸಭೆಯಲ್ಲಿ ಅಮೇರಿಕ ಹಾಗೂ ಭಾರತದ ಟೆಕ್ ಉದ್ಯಮದ ನಾಯಕರು ಭಾಗಿಯಾಗಿದ್ದರು.

2021ರಲ್ಲಿ ಇಂಡೋ-ಅಮೇರಿಕಾ ದ್ವಿಪಕ್ಷೀಯ ವ್ಯಾಪಾರ 150 ಬಿಲಿಯನ್ ಡಾಲರ್ ನಷ್ಟಿತ್ತು.  ನಮ್ಮ ಜನರ ನಡುವಿನ ಸಂಬಂಧಗಳು ನಮ್ಮ ದೇಶಗಳ ಸಂಬಂಧದ ನಿಕಟತೆಯನ್ನು ದೃಢೀಕರಿಸುತ್ತವೆ. 2 ಲಕ್ಷ ಭಾರತೀಯರು ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರಿಂದ ಅಮೇರಿಕಾ ಶಾಲೆ ಮತ್ತು ವಿಶ್ವವಿದ್ಯಾಲಯಗಳನ್ನು ವಿದ್ಯಾರ್ಥಿಗಳು ಶ್ರೀಮಂತಗೊಳಿಸುತ್ತಿದ್ದಾರೆ.  ಭಾರತೀಯರು ತಮ್ಮ ನಡುವೆ ಸಂವಹನ ನಡೆಸಲು ವಾಟ್ಸ್ ಆಪ್ ನ್ನು ಬಳಕೆ ಮಾಡುತ್ತಿದ್ದು ಹಲವು ಅಮೇರಿಕ ಸಂಸ್ಥೆಗಳು ಕಾರ್ಯನಿರ್ವಹಿಸುವುದಕ್ಕೆ ಇನ್ಫೋಸಿಸ್ ಮೇಲೆ ಅವಲಂಬಿತವಾಗಿದೆ ಎಂದು ಅಮೇರಿಕಾ ವಿತ್ತ ಸಚಿವರು ಹೇಳಿದರು.

ಇನ್ಫೋಸಿಸ್ ನ ಅಧ್ಯಕ್ಷ ನಂದನ್ ನಿಲೇಕಣಿ, ಐಬಿಎಂ ಇಂಡಿಯಾದ ಎಂಡಿ ಸಂದೀಪ್ ಪಟೇಲ್, ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ, ಫಾಕ್ಸ್ ಕಾನ್ ಇಂಡಿಯಾ ಮುಖ್ಯಸ್ಥ ಜೋಷ್ ಫೌಲ್ಗರ್ ಮತ್ತು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿ ಸಹ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

2 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

2 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

12 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

12 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

12 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

13 hours ago