ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

May 16, 2024
5:06 PM

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ ಎಂದು ಪಾಕ್ ಆಡಳಿತ ವ್ಯವಸ್ಥೆ ಬಗ್ಗೆ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (MQM-P) ಸಂಸದ ಸೈಯದ್ ಮುಸ್ತಫಾ ಕಮಾಲ್ (Syed Mustafa Kamal) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
ಪಾಕ್ (Pakistan) ಆಡಳಿತ ವ್ಯವಸ್ಥೆಗೆ ಸಂಸತ್‌ನಲ್ಲೇ ಕೆಂಡವಾದ ಸಂಸದ, ಭಾರತದ ಬೆಳವಣಿಗೆ ಶ್ಲಾಘಿಸುತ್ತಾ ಪಾಕ್ ದುರಾಡಳಿತದ ಬಗ್ಗೆ ಟೀಕೆ ಮಾಡಿದ್ದಾರೆ. ಭಾರತವು ಚಂದ್ರನನ್ನು ತಲುಪಿದೆ ಎಂಬ ಸುದ್ದಿಯನ್ನು ನಾವು ಟಿವಿ ಪರದೆಗಳಲ್ಲಿ ನೋಡಿದ ಎರಡು ಸೆಕೆಂಡುಗಳ ನಂತರ ಕರಾಚಿಯಲ್ಲಿ ತೆರೆದ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿದೆ ಎಂಬ ಸುದ್ದಿ ಬರುತ್ತದೆ. ಕರಾಚಿಯಲ್ಲಿನ ಶುದ್ಧ ನೀರಿನ ಕೊರತೆಯನ್ನು ಉಲ್ಲೇಖಿಸಿ, ಕರಾಚಿಯು ಪಾಕಿಸ್ತಾನ ಆದಾಯದ ಎಂಜಿನ್ ಆಗಿದೆ. ದೇಶದಲ್ಲಿ ಎರಡು ಬಂದರುಗಳಿವೆ, ಎರಡೂ ಕರಾಚಿಯಲ್ಲಿವೆ. ಒಂದು ರೀತಿಯಲ್ಲಿ ಇದು ದೇಶದ ಹೆಬ್ಬಾಗಿಲು. ಆದರೆ ಕರಾಚಿಗೆ 15 ವರ್ಷಗಳಿಂದ ಶುದ್ಧ ನೀರು ಸಿಕ್ಕಿಲ್ಲ. ನೀರು ಬಂದಾಗಲೆಲ್ಲ ಟ್ಯಾಂಕರ್ ಮಾಫಿಯಾ ವಶವಾಗಿದೆ ಎಂದು ಹರಿಹಾಯ್ದರು.

ಸಿಂಧ್ ಪ್ರಾಂತ್ಯದಲ್ಲಿ ಸುಮಾರು 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಈ ಸಂಖ್ಯೆ ಸುಮಾರು 2.6 ಕೋಟಿಯಾಗಿದೆ. ಒಟ್ಟು 48 ಸಾವಿರ ಶಾಲೆಗಳಿವೆ. ಆದರೆ ಈ ಪೈಕಿ 11 ಸಾವಿರ ಶಾಲೆಗಳು ಖಾಲಿ ಇವೆ ಎಂದು ವರದಿ ತೋರಿಸುತ್ತದೆ. ದೇಶದಲ್ಲಿ 2.62 ಕೋಟಿ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ
July 29, 2025
6:47 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ
July 29, 2025
6:18 AM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group