Advertisement
MIRROR FOCUS

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

Share

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ ಎಂದು ಪಾಕ್ ಆಡಳಿತ ವ್ಯವಸ್ಥೆ ಬಗ್ಗೆ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (MQM-P) ಸಂಸದ ಸೈಯದ್ ಮುಸ್ತಫಾ ಕಮಾಲ್ (Syed Mustafa Kamal) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕ್ (Pakistan) ಆಡಳಿತ ವ್ಯವಸ್ಥೆಗೆ ಸಂಸತ್‌ನಲ್ಲೇ ಕೆಂಡವಾದ ಸಂಸದ, ಭಾರತದ ಬೆಳವಣಿಗೆ ಶ್ಲಾಘಿಸುತ್ತಾ ಪಾಕ್ ದುರಾಡಳಿತದ ಬಗ್ಗೆ ಟೀಕೆ ಮಾಡಿದ್ದಾರೆ. ಭಾರತವು ಚಂದ್ರನನ್ನು ತಲುಪಿದೆ ಎಂಬ ಸುದ್ದಿಯನ್ನು ನಾವು ಟಿವಿ ಪರದೆಗಳಲ್ಲಿ ನೋಡಿದ ಎರಡು ಸೆಕೆಂಡುಗಳ ನಂತರ ಕರಾಚಿಯಲ್ಲಿ ತೆರೆದ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿದೆ ಎಂಬ ಸುದ್ದಿ ಬರುತ್ತದೆ. ಕರಾಚಿಯಲ್ಲಿನ ಶುದ್ಧ ನೀರಿನ ಕೊರತೆಯನ್ನು ಉಲ್ಲೇಖಿಸಿ, ಕರಾಚಿಯು ಪಾಕಿಸ್ತಾನ ಆದಾಯದ ಎಂಜಿನ್ ಆಗಿದೆ. ದೇಶದಲ್ಲಿ ಎರಡು ಬಂದರುಗಳಿವೆ, ಎರಡೂ ಕರಾಚಿಯಲ್ಲಿವೆ. ಒಂದು ರೀತಿಯಲ್ಲಿ ಇದು ದೇಶದ ಹೆಬ್ಬಾಗಿಲು. ಆದರೆ ಕರಾಚಿಗೆ 15 ವರ್ಷಗಳಿಂದ ಶುದ್ಧ ನೀರು ಸಿಕ್ಕಿಲ್ಲ. ನೀರು ಬಂದಾಗಲೆಲ್ಲ ಟ್ಯಾಂಕರ್ ಮಾಫಿಯಾ ವಶವಾಗಿದೆ ಎಂದು ಹರಿಹಾಯ್ದರು.

ಸಿಂಧ್ ಪ್ರಾಂತ್ಯದಲ್ಲಿ ಸುಮಾರು 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಈ ಸಂಖ್ಯೆ ಸುಮಾರು 2.6 ಕೋಟಿಯಾಗಿದೆ. ಒಟ್ಟು 48 ಸಾವಿರ ಶಾಲೆಗಳಿವೆ. ಆದರೆ ಈ ಪೈಕಿ 11 ಸಾವಿರ ಶಾಲೆಗಳು ಖಾಲಿ ಇವೆ ಎಂದು ವರದಿ ತೋರಿಸುತ್ತದೆ. ದೇಶದಲ್ಲಿ 2.62 ಕೋಟಿ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

9 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

9 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

18 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

18 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

18 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

19 hours ago