Advertisement
MIRROR FOCUS

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

Share

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ ಎಂದು ಪಾಕ್ ಆಡಳಿತ ವ್ಯವಸ್ಥೆ ಬಗ್ಗೆ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (MQM-P) ಸಂಸದ ಸೈಯದ್ ಮುಸ್ತಫಾ ಕಮಾಲ್ (Syed Mustafa Kamal) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕ್ (Pakistan) ಆಡಳಿತ ವ್ಯವಸ್ಥೆಗೆ ಸಂಸತ್‌ನಲ್ಲೇ ಕೆಂಡವಾದ ಸಂಸದ, ಭಾರತದ ಬೆಳವಣಿಗೆ ಶ್ಲಾಘಿಸುತ್ತಾ ಪಾಕ್ ದುರಾಡಳಿತದ ಬಗ್ಗೆ ಟೀಕೆ ಮಾಡಿದ್ದಾರೆ. ಭಾರತವು ಚಂದ್ರನನ್ನು ತಲುಪಿದೆ ಎಂಬ ಸುದ್ದಿಯನ್ನು ನಾವು ಟಿವಿ ಪರದೆಗಳಲ್ಲಿ ನೋಡಿದ ಎರಡು ಸೆಕೆಂಡುಗಳ ನಂತರ ಕರಾಚಿಯಲ್ಲಿ ತೆರೆದ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿದೆ ಎಂಬ ಸುದ್ದಿ ಬರುತ್ತದೆ. ಕರಾಚಿಯಲ್ಲಿನ ಶುದ್ಧ ನೀರಿನ ಕೊರತೆಯನ್ನು ಉಲ್ಲೇಖಿಸಿ, ಕರಾಚಿಯು ಪಾಕಿಸ್ತಾನ ಆದಾಯದ ಎಂಜಿನ್ ಆಗಿದೆ. ದೇಶದಲ್ಲಿ ಎರಡು ಬಂದರುಗಳಿವೆ, ಎರಡೂ ಕರಾಚಿಯಲ್ಲಿವೆ. ಒಂದು ರೀತಿಯಲ್ಲಿ ಇದು ದೇಶದ ಹೆಬ್ಬಾಗಿಲು. ಆದರೆ ಕರಾಚಿಗೆ 15 ವರ್ಷಗಳಿಂದ ಶುದ್ಧ ನೀರು ಸಿಕ್ಕಿಲ್ಲ. ನೀರು ಬಂದಾಗಲೆಲ್ಲ ಟ್ಯಾಂಕರ್ ಮಾಫಿಯಾ ವಶವಾಗಿದೆ ಎಂದು ಹರಿಹಾಯ್ದರು.

ಸಿಂಧ್ ಪ್ರಾಂತ್ಯದಲ್ಲಿ ಸುಮಾರು 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ರಾಷ್ಟ್ರೀಯ ಮಟ್ಟದಲ್ಲಿ ಈ ಸಂಖ್ಯೆ ಸುಮಾರು 2.6 ಕೋಟಿಯಾಗಿದೆ. ಒಟ್ಟು 48 ಸಾವಿರ ಶಾಲೆಗಳಿವೆ. ಆದರೆ ಈ ಪೈಕಿ 11 ಸಾವಿರ ಶಾಲೆಗಳು ಖಾಲಿ ಇವೆ ಎಂದು ವರದಿ ತೋರಿಸುತ್ತದೆ. ದೇಶದಲ್ಲಿ 2.62 ಕೋಟಿ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

5 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

5 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

21 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago