ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement
Advertisement

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

Advertisement

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

47 minutes ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

1 hour ago

ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…

2 hours ago

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…

2 hours ago

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…

2 hours ago

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

10 hours ago