Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

6 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago