Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

3 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

3 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

17 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago