Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

20 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

22 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

23 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago