Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago