Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

7 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

14 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

16 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

17 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago