Advertisement
ಸುದ್ದಿಗಳು

ಭಾರತ ಅತಿದೊಡ್ಡ ಮಾಲಿನ್ಯಭರಿತ ದೇಶಗಳಲ್ಲಿ ಒಂದು | ಭಾರತೀಯ ಮೂಲದ ಯುಎಸ್ ಅಧ್ಯಕ್ಷೆಯಿಂದ ಆರೋಪ | ನೆಟ್ಟಿಗರಿಂದ ತರಾಟೆ |

Share

ಭಾರತ ಅತಿದೊಡ್ಡ ಮಾಲಿನ್ಯಕಾರಕ ದೇಶಗಳಲ್ಲಿ ಒಂದು ಎಂದು ಭಾರತೀಯ ಮೂಲದ ಯುಎಸ್ ರಿಪಬ್ಲಿಕನ್ ಅಧ್ಯಕ್ಷೆ ನಿಕ್ಕಿ ಹ್ಯಾಲೆ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿಕ್ಕಿ ಹ್ಯಾಲೆ, ಪರಿಸರವನ್ನು ಉಳಿಸಲು ಭಾರತ ಹಾಗೂ ಚೀನಾದಲ್ಲಿ ಮಾಲಿನ್ಯ ನಿಯಂತ್ರಣ ಕಾರ್ಯಗಳನ್ನು ಮೊದಲು ಕೈಗೊಳ್ಳಬೇಕಿದೆ ಎಂದು ನಿಕ್ಕಿ ಹೇಳಿಕೆ ನೀಡಿದ್ದರು. ನಿಕ್ಕಿ ಹ್ಯಾಲೆಯ ಈ ಹೇಳಿಕೆಯನ್ನು ವಿರೋಧಿಸಿ ಬಳಕೆದಾರರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪರಿಸರವನ್ನು ಸಂರಕ್ಷಿಸುವ ಗಂಭೀರತೆಯ ಬಗ್ಗೆ ಯೋಚಿಸಲು ಬಯಸುವುದಾದರೆ ಭಾರತ ಹಾಗೂ ಚೀನಾದಲ್ಲಿ ಮೊದಲು ಬದಲಾವಣೆಯನ್ನು ತರಬೇಕಿದೆ, ಏಕೆಂದರೆ ಈ ದೇಶಗಳು ಅತಿದೊಡ್ಡ ಮಾಲಿನ್ಯಕಾರಕರಗಳಾಗಿವೆ ಎಂದು ಹ್ಯಾಲೆ ಟ್ವೀಟ್ ಮಾಡಿದ್ದಾರೆ. ಹ್ಯಾಲೆ ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಆಕೆಗೆ ಭಾರೀ ಮುಖಭಂಗವಾಗಿದೆ.

 

ಲೇಖಕ ಶೈಲೇಂದ್ರ ಮಲಿಕ್ ಕೂಡ ನಿಕ್ಕಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು ವಿವಿಧ ಅಮೇರಿಕನ್ ಕಂಪನಿಗಳ ಸಿಇಒಗಳಾಗಿ ಭಾರತೀಯರು ಕಾರ್ಯನಿರ್ವಹಿಸುತ್ತಿರುವುದು ಉತ್ತಮ ವಿಚಾರ ಆದರೆ ರಾಜಕಾರಣಿಗಳಾಗಿ ಅವರಷ್ಟು ನಿಷ್ಪ್ರೋಜಕರು ಬೇರೆ ಯಾರೂ ಇಲ್ಲ ಎಂದು ಟೀಕಿಸಿದ್ದಾರೆ.

ತಪ್ಪು ಮಾಹಿತಿಯ ಆಧಾರದ ಮೇಲೆ ಭಾರತವನ್ನು ದೂಷಿಸುವ ಭಾರತೀಯ ಮೂಲದ ರಾಜಕೀಯ ವ್ಯಕ್ತಿಗಳು ವಿದೇಶದಲ್ಲಿ ನೆಲೆಯೂರಿದ ನಂತರ ದೇಶವನ್ನು ಜರೆಯುವ ಕಾರ್ಯದಲ್ಲಿ ತೊಡಗಬಾರದು ಎಂದು ಬಳಕೆದಾರರು ನಿಕ್ಕಿಗೆ ಕಾಮೆಂಟ್ ಮಾಡಿದ್ದಾರೆ.

ಭಾರತೀಯ ಮೂಲದ ಯಾರಾದರೂ ವಿದೇಶದಲ್ಲಿ ಯಶಸ್ಸನ್ನು ಸಾಧಿಸಿದಾಗ ಭಾರತೀಯರು ಆ ಬಗ್ಗೆ ಹೆಮ್ಮೆಪಡಬಾರದು ಎಂಬುದಕ್ಕೆ ನಿಕ್ಕಿ ಹ್ಯಾಲಿಯಂತವರು ಉದಾಹರಣೆಯಾಗಿದ್ದಾರೆ ಎಂದು ಬಳಕೆದಾರರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತೀಯರು ಯಶಸ್ಸು ಸಾಧಿಸಿದಾಗ ಅದನ್ನು ಕೊಂಡಾಡುವ ಮೊದಲು ಅವರ ಪರಂಪರೆ ಹಾಗೂ ಅವರ ಪೂರ್ವಜರು ತಮ್ಮ ತಾಯ್ನಾಡನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ ಎಂಬುದನ್ನು ಕಾಯುವುದು ಉತ್ತಮ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

4 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

8 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

17 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

17 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago