ಜಾಗತಿಕ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಅತಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿರುವುದಕ್ಕೆ ಕೇಂದ್ರ ಸರ್ಕಾರದ ದೂರದೃಷ್ಟಿಯ ನೀತಿಗಳು ಕಾರಣವಾಗಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಅವರು, ಕೆಲವು ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದುರ್ಬಲ ಆರ್ಥಿಕತೆಯುಳ್ಳ ದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿತ್ತು. ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ಫಲವಾಗಿ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳವಣಿಗೆ ಹೊಂದಿದ್ದು, ಈಗ 4ನೇ ಸ್ಥಾನಕ್ಕೆ ಏರಿದೆ ಎಂದು ಹೇಳಿದರು. ವಿಕಸಿತ ಭಾರತಕ್ಕೆ ದೇಶದ ಎಲ್ಲಾ ನಾಗರಿಕರು ಕೊಡುಗೆ ನೀಡಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಭಾರತದ ಪ್ರಗತಿಗೆ ಪೂರಕವಾಗುವಂತಹ ಕ್ರಮಗಳನ್ನು ಕೈಗೊಂಡ ಪರಿಣಾಮವಾಗಿ ಎಲ್ಲಾ ವಲಯಗಳಲ್ಲೂ ಅಪಾರ ಬೆಳವಣಿಗೆ ಉಂಟಾಗಿದೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel