Advertisement
MIRROR FOCUS

ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ

Share

ತೆಂಗು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್  ತಿಳಿಸಿದ್ದಾರೆ.

ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ತಿಳಿಸಿದ ಅವರು, ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ ಅತಿ ಹೆಚ್ಚು ತೆಂಗು ಉತ್ಪಾದನೆ ಮಾಡುವ  ದೇಶವಾಗಿದೆ.  ತೆಂಗು ಬೆಳೆಗೆ ಸಂಬಂಧಿಸಿದಂತೆ ಅನೇಕ ರೋಗ ಬಾಧೆಗಳು ಹೆಚ್ಚಾಗಿದ್ದು, ಇವುಗಳನ್ನು ನಿಯಂತ್ರಿಸಲು ಹಲವು ಸಂಶೋಧನೆಗಳನ್ನು ಕೈಗೊಳ್ಳಲಾಗಿದೆ. ತೆಂಗು ಅಭಿವೃದ್ಧಿ ಮಂಡಳಿಯ ವಿವಿಧ ಕೃಷಿ ವಿಶ್ವವಿದ್ಯಾಲಯಗಳು, ಕೀಟ ಸಂಶೋಧನಾ ಮಂಡಳಿ ಸೇರಿದಂತೆ ಹಲವು ಇತರ ಸಂಸ್ಥೆಗಳ ಜತೆಗೂಡಿ ರೋಗಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರೋಗ ನಿರೋಧಕ ಶಕ್ತಿ ಹೊಂದಿರುವ ತೆಂಗು ಬೆಳೆಗೆ ಆದ್ಯತೆ ನೀಡಲಾಗಿದೆ. ತೆಂಗು ಬೆಳೆ ಪ್ರದೇಶದ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗಿದ್ದು, ವಿಭಿನ್ನ ಯೋಜನೆಗಳ ಮೂಲಕ ಗುಣಮಟ್ಟದ ತೆಂಗು ಉತ್ಪಾದನೆ, ಕ್ಷೇತ್ರಾಭಿವೃದ್ಧಿ, ರೋಗ ನಿಯಂತ್ರಣ, ಕೌಶಲ ವಿಕಾಸಕ್ಕೆ ಹಣಕಾಸು ನೆರವು ನೀಡಲಾಗುತ್ತಿದೆ. ತೆಂಗಿನ ಮರಕ್ಕೆ ಉಂಟಾಗುವ ಕೀಟಬಾಧೆ ನಿಯಂತ್ರಣಕ್ಕೆ ಕೇರಳ ವಿಶ್ವವಿದ್ಯಾಲಯ ಹೊಸ ತಳಿ ಅಭಿವೃದ್ಧಿ ಪಡಿಸಿದೆ.ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಕೀಟ ಸಮಸ್ಯೆ ನಿಭಾಯಿಸಲು ರೈತರಿಗೆ 50 ಕೋಟಿ ರೂಪಾಯಿ ನೆರವು ಒದಗಿಸಲಾಗಿದೆ ಎಂದು ತಿಳಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರಿಗೆ ಹೆಚ್ಚು ಲಾಭ ದೊರೆಯುವಂತಾಗಲು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ನೀಡಲಾಗುತ್ತಿದ್ದು, ಪ್ರಸ್ತುತ ದರ ಕ್ವಿಂಟಾಲ್ ಗೆ 11 ಸಾವಿರ ರೂಪಾಯಿಗೂ ಅಧಿಕ ಮೌಲ್ಯವನ್ನು ನಿಗದಿಪಡಿಸಲಾಗಿದೆ. ಹಿಂದಿನ 3 ವರ್ಷಗಳಲ್ಲಿ 2 ಲಕ್ಷದ 75 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಲಾಗಿದೆ ಎಂದು ವಿವರಿಸಿದರು. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೆಲವು ರಾಜ್ಯಗಳು ಜಾರಿಗೊಳಿಸಿಲ್ಲ. ರೈತರಿಗೆ ಯಾವುದೇ ರೀತಿಯಲ್ಲಿ ನಷ್ಟವಾದರೆ ಅದನ್ನು ಭರಿಸಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿಲುವಾಗಿದೆ. ಮುಂದಿನ ದಿನಗಳಲ್ಲಿ ಋತುಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿಗೆ ತರಲು  ಚಿಂತನೆ ನಡೆಸಲಾಗಿದೆ. ರಾಜ್ಯಗಳ ಪ್ರಸ್ತಾವನೆ ಆಧರಿಸಿ ಯೋಜನೆಗಳನ್ನು  ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ಇ-ನಾಮ್ ವೇದಿಕೆಗೆ ಕೃಷಿ ಮಾರುಕಟ್ಟೆಗಳನ್ನು ಸೇರ್ಪಡೆಗೊಳಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 23 ರಾಜ್ಯಗಳ ಸಾವಿರಕ್ಕೂ ಅಧಿಕ ಎಪಿಎಂಸಿಗಳು ಸೇರ್ಪಡೆಯಾಗಿವೆ. ಇ-ನಾಮ್ ಮೂಲಕ 4 ಲಕ್ಷ ಕೋಟಿ ರೂಪಾಯಿ ವಹಿವಾಟು ನಡೆಸಲಾಗಿದೆ. 1 ಕೋಟಿಗೂ ಅಧಿಕ ರೈತರು ಇ-ನಾಮ್ ನಲ್ಲಿ ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

7 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago