ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

February 22, 2026
9:50 AM
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ ಲಭ್ಯತೆ ಬಗ್ಗೆ ಆತಂಕ ಹೆಚ್ಚಿಸಿದೆ. ಕೃಷಿ ಮತ್ತು ಕುಡಿಯುವ ನೀರಿನ ಭದ್ರತೆಗೆ ಸಮರ್ಪಕ ನೀರು ನಿರ್ವಹಣೆ ಅತ್ಯಗತ್ಯವಾಗಿದೆ.

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟ ಕುಸಿತವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕೇಂದ್ರ ಜಲ ಆಯೋಗ (CWC) ಬಿಡುಗಡೆ ಮಾಡಿದ ಇತ್ತೀಚಿನ ವರದಿ ಪ್ರಕಾರ, ದೇಶದ 166 ಪ್ರಮುಖ ಜಲಾಶಯಗಳಲ್ಲಿ ಒಟ್ಟು ಸಂಗ್ರಹ ಸಾಮರ್ಥ್ಯದ ಕೇವಲ 61.65% ಮಾತ್ರ ನೀರು ಲಭ್ಯವಿದೆ.

ಈ ಜಲಾಶಯಗಳ ಒಟ್ಟು ಸಂಗ್ರಹ ಸಾಮರ್ಥ್ಯ 183.565 ಬಿಲಿಯನ್ ಕ್ಯೂಬಿಕ್ ಮೀಟರ್ (BCM) ಆಗಿದ್ದು, ಪ್ರಸ್ತುತ ಕೇವಲ 113.160 BCM ನೀರು ಮಾತ್ರ ಉಳಿದಿದೆ. ಜನವರಿಯಿಂದ ದೇಶಾದ್ಯಂತ 56% ಮಳೆಯ ಕೊರತೆ ದಾಖಲಾಗಿದ್ದು, ಇದರ ಪರಿಣಾಮವಾಗಿ ಜಲಾಶಯಗಳ ನೀರಿನ ಮಟ್ಟ ವೇಗವಾಗಿ ಕುಸಿಯುತ್ತಿದೆ ಎಂದು ವರದಿ ತಿಳಿಸಿದೆ. ಈ ಮಳೆಯ ಕೊರತೆ ಮುಂದಿನ ತಿಂಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಸಂಬಂಧಿಸಿದ ನೀರಿನ ಲಭ್ಯತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಇತ್ತೀಚಿನ ಮಟ್ಟ ಕಳೆದ ವರ್ಷದಿಗಿಂತ 11.5% ಹೆಚ್ಚಾಗಿದ್ದು, ಕಳೆದ 10 ವರ್ಷದ ಸರಾಸರಿಗಿಂತಲೂ 25% ಹೆಚ್ಚು ಇದೆ. ಆದರೂ ಪ್ರಸ್ತುತ ಕುಸಿತದ ಪ್ರವೃತ್ತಿ ಮುಂದಿನ ಬೇಸಿಗೆಗೆ ನೀರಿನ ಸಂಕಷ್ಟ ಉಂಟಾಗುವ ಭೀತಿ ಮೂಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕೃಷಿ ನೀರಾವರಿ ಕೊರತೆ, ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಮುಂತಾದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ನೀರಿನ ಮಟ್ಟ ಇನ್ನಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ.

ತಜ್ಞರ ಪ್ರಕಾರ, ಮುಂದಿನ ಮಳೆಗಾಲದವರೆಗೆ ನೀರಿನ ಸಮರ್ಪಕ ನಿರ್ವಹಣೆ ಹಾಗೂ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ಇಲ್ಲವಾದರೆ ಬೇಸಿಗೆ ವೇಳೆಯಲ್ಲಿ ನೀರಿನ ಸಂಕಷ್ಟ ಹೆಚ್ಚಾಗುವ ಸಾಧ್ಯತೆ ಇದೆ.

According to the Central Water Commission, water storage in India’s 166 major reservoirs has dropped to 61.65% of total capacity due to a 56% rainfall deficit since January. Although storage levels are higher than last year and above the 10-year average, the declining trend raises concerns about possible water shortages for drinking and irrigation during the upcoming summer months.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror