2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

April 8, 2026
7:47 AM
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ ನೀಡಿದೆ. ಎಲ್‌ನಿನೊ ಪರಿಣಾಮದಿಂದ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಮಳೆ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್‌ ವೆದರ್‌ ನೀಡಿರುವ ಮುನ್ಸೂಚನೆಯ ಪ್ರಕಾರ, 2026ರಲ್ಲಿ ಭಾರತದಲ್ಲಿ ಮಳೆಗಾಲವು ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗುವ ಸಾಧ್ಯತೆ ಹೆಚ್ಚಿದೆ.  ಜೂನ್‌ರಿಂದ ಸೆಪ್ಟೆಂಬರ್‌ವರೆಗೆ ನಡೆಯುವ ದಕ್ಷಿಣ-ಪಶ್ಚಿಮ ಮಳೆಗಾಲದಲ್ಲಿ ಸುಮಾರು 94% ಮಾತ್ರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದು “ಸಾಮಾನ್ಯಕ್ಕಿಂತ ಕಡಿಮೆ ಮಳೆ” ವರ್ಗಕ್ಕೆ ಸೇರುತ್ತದೆ.

ಪ್ರಮುಖ ಕಾರಣ ಏನು? :  ಈ ಬಾರಿ ಮಳೆ ಕಡಿಮೆಯಾಗಲು ಪ್ರಮುಖ ಕಾರಣವಾಗಿ El Niño ಪರಿಣಾಮವನ್ನು ಉಲ್ಲೇಖಿಸಲಾಗಿದೆ. ಎಲ್‌ನಿನೊ ಪರಿಣಾಮವು ಸಾಮಾನ್ಯವಾಗಿ ಮಳೆ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ವಿಶೇಷವಾಗಿ ಆಗಸ್ಟ್–ಸೆಪ್ಟೆಂಬರ್‌ನಲ್ಲಿ ಪರಿಣಾಮ ಹೆಚ್ಚಾಗಬಹುದು. ಮಳೆ ಹಂಚಿಕೆ (distribution) ಅಸಮತೋಲನವಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್‌ ಹೇಳಿದೆ. 2026ರಲ್ಲಿ ಎಲ್‌ನಿನೊ ಬೆಳವಣಿಗೆ ಮಧ್ಯ ಮಳೆಗಾಲದಲ್ಲಿ ಆರಂಭವಾಗಿ ನಂತರ ತೀವ್ರಗೊಳ್ಳಬಹುದು,  ಸುಮಾರು 60% ಸಾಧ್ಯತೆ ಸಾಮಾನ್ಯಕ್ಕಿಂತ ಕಡಿಮೆ ಮಳೆಯ ಇದೆ ಎಂದು ಮಾದರಿಗಳು ಸೂಚಿಸುತ್ತಿವೆ. ಮಳೆ ವಿಳಂಬ (delay) ಮತ್ತು ಅನಿಯಮಿತ ವಿತರಣೆಯ ಸಾಧ್ಯತೆ ಹೆಚ್ಚಿದೆ. ಜೂನ್–ಜುಲೈ ತಿಂಗಳಲ್ಲಿ ಸ್ವಲ್ಪ ಸಮಾನ ಅಥವಾ ಕಡಿಮೆ ಮಳೆ ಇರಬಹುದು. ಆಗಸ್ಟ್–ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಕೊರತೆ ಸಾಧ್ಯತೆ ಇದೆ.

ಕೃಷಿಗೆ ಎಚ್ಚರಿಕೆ :  ಭಾರತದ ಕೃಷಿ ಮಳೆಗಾಲದ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ, ಈ ಮುನ್ಸೂಚನೆ ರೈತರಿಗೆ ಆತಂಕಕಾರಿ ಬೆಳವಣಿಗೆ ಎಂದೇ ಹೇಳಬಹುದು. ಬೆಳೆ ಉತ್ಪಾದನೆ ಕುಸಿತ ಸಾಧ್ಯತೆ, ನೀರಿನ ಕೊರತೆ ಹೆಚ್ಚುವ ಅಪಾಯ, ಗ್ರಾಮೀಣ ಆರ್ಥಿಕತೆಗೆ ಹೊಡೆತ, ಆಹಾರ ದರ (inflation) ಏರಿಕೆ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಮುನ್ಸೂಚನೆ ಪ್ರಕಾರ 2026ರ ಮಳೆಗಾಲವು ಸಂಪೂರ್ಣ ಅತಂತ್ರವಾಗಿರಬಹುದು, ಕೃಷಿಗೆ ಮುಖ್ಯವಾಗಿರುವ ಎರಡನೇ ಭಾಗದಲ್ಲಿ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ. ಇದು ಬೆಳೆ ಉತ್ಪಾದನೆ ಹಾಗೂ ನೀರಿನ ಲಭ್ಯತೆಗೆ ನೇರ ಪರಿಣಾಮ ಬೀರುತ್ತದೆ.

Skymet Weather has forecast a below-normal monsoon for India in 2026, with rainfall expected at around 94% of the long-period average. The weakening is mainly attributed to a developing El Niño, which may intensify during the second half of the monsoon (August–September), raising concerns over agriculture, water availability, and inflation.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ
June 9, 2026
10:55 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ
June 9, 2026
10:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ
June 9, 2026
1:51 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror