₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

July 7, 2026
10:32 PM
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ ಜಾಲವನ್ನು ED ಬಯಲಿಗೆಳೆದಿದೆ. ನಕಲಿ GST ಬಿಲ್‌, ಗ್ರಾಮೀಣ ಬ್ಯಾಂಕ್ ಖಾತೆಗಳು ಹಾಗೂ ಹವಾಲಾ ಜಾಲ ಬಳಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ವಿದೇಶಿ ಮೂಲದ ಅಡಿಕೆಯನ್ನು ಅಕ್ರಮವಾಗಿ ಸಾಗಾಟ ಮಾಡಿ ಸುಮಾರು ₹1,500 ಕೋಟಿ ಮೌಲ್ಯದ ಹಣ ವರ್ಗಾವಣೆ (ಮನಿ ಲಾಂಡರಿಂಗ್) ನಡೆಸುತ್ತಿದ್ದ ದೊಡ್ಡ ಜಾಲವನ್ನು ಜಾರಿ ನಿರ್ದೇಶನಾಲಯ (ED) ಪತ್ತೆಹಚ್ಚಿದೆ. ಈ ಜಾಲವು ನಕಲಿ GST ಬಿಲ್‌, ನಕಲಿ ಕಂಪನಿಗಳು, ಸುಳ್ಳು ಸಾರಿಗೆ ದಾಖಲೆಗಳು ಹಾಗೂ ಮಿಜೋರಾಂನ ಕೆಲವು ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ಹವಾಲಾ ಹಣ ವರ್ಗಾವಣೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ED ಅಧಿಕಾರಿಗಳು ಜುಲೈ 3ರಂದು ಅಸ್ಸಾಂ, ಮಿಜೋರಾಂ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳ 20 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳು, ಡೈರಿಗಳು, ಆಸ್ತಿ ದಾಖಲೆಗಳು, ₹1.30 ಕೋಟಿ ನಗದು ಹಾಗೂ 33 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ಅಕ್ರಮ ಜಾಲ ಹೇಗೆ ಕಾರ್ಯನಿರ್ವಹಿಸುತ್ತಿತ್ತು? :  ತನಿಖೆಯ ಪ್ರಕಾರ, ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಮಿಜೋರಾಂನ ಚಾಂಫೈ–ಜೋಖಾವ್ಥಾರ್ ಗಡಿ ಮಾರ್ಗದ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ನಕಲಿ GST ಬಿಲ್‌, ನಕಲಿ ಸರಬರಾಜುದಾರರು ಹಾಗೂ ಖರೀದಿದಾರರ ಹೆಸರಿನಲ್ಲಿ ದಾಖಲೆಗಳನ್ನು ಸೃಷ್ಟಿಸಿ ವಿವಿಧ ರಾಜ್ಯಗಳಿಗೆ ಸಾಗಿಸಲಾಗುತ್ತಿತ್ತು.

ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಖರೀದಿದಾರರು ಹಣವನ್ನು ಅಸ್ಸಾಂನ ಹವಾಲಾ ಜಾಲಕ್ಕೆ ಪಾವತಿಸುತ್ತಿದ್ದರು. ಅಲ್ಲಿಂದ ಹಣವನ್ನು ಮಿಜೋರಾಂ ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ತಿರುಗಿಸಿ, ಕೊನೆಯಲ್ಲಿ ಮ್ಯಾನ್ಮಾರ್‌ನ ಪೂರೈಕೆದಾರರಿಗೆ ಹವಾಲಾ ಮೂಲಕ ತಲುಪಿಸಲಾಗುತ್ತಿತ್ತು ಎಂದು ED ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಚಾಂಫೈನಲ್ಲಿ ಅಡಿಕೆ ಬೆಳೆಯೇ ಇಲ್ಲ! :ED ಪ್ರಕಾರ, ಸರ್ಕಾರಿ ಉತ್ಪಾದನಾ ಅಂಕಿಅಂಶಗಳನ್ನು ಪರಿಶೀಲಿಸಿದಾಗ ಚಾಂಫೈ ಜಿಲ್ಲೆಯಲ್ಲಿ ಸಂಬಂಧಿತ ಅವಧಿಯಲ್ಲಿ ಅಡಿಕೆ ಉತ್ಪಾದನೆ ಶೂನ್ಯವಾಗಿತ್ತು. ಆದರೂ ಅಲ್ಲಿಂದಲೇ ದೊಡ್ಡ ಪ್ರಮಾಣದಲ್ಲಿ ಅಡಿಕೆ ಸಾಗಾಟವಾಗಿದೆ ಎಂದು ದಾಖಲೆಗಳು ತೋರಿಸುತ್ತಿದ್ದು, ಇದು ವಿದೇಶಿ ಮೂಲದ ಅಡಿಕೆ ಕಳ್ಳಸಾಗಣೆಗೆ ಮತ್ತಷ್ಟು ಬಲವಾದ ಸಾಕ್ಷಿಯಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ. ತನಿಖೆ ಇನ್ನಷ್ಟು ನಡೆಯುತ್ತಿದೆ.

The Enforcement Directorate has uncovered a ₹1,500-crore India–Myanmar areca nut smuggling and money laundering network. The probe found that the syndicate allegedly used forged GST invoices, fake firms, rural bank accounts in Mizoram, and hawala channels to move illicit funds. Cash, property documents, and bank accounts have been seized or frozen as the investigation continues.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror