Advertisement
MIRROR FOCUS

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

Share

ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ವಿದೇಶಿ ಮೂಲದ ಅಡಿಕೆಯನ್ನು ಅಕ್ರಮವಾಗಿ ಸಾಗಾಟ ಮಾಡಿ ಸುಮಾರು ₹1,500 ಕೋಟಿ ಮೌಲ್ಯದ ಹಣ ವರ್ಗಾವಣೆ (ಮನಿ ಲಾಂಡರಿಂಗ್) ನಡೆಸುತ್ತಿದ್ದ ದೊಡ್ಡ ಜಾಲವನ್ನು ಜಾರಿ ನಿರ್ದೇಶನಾಲಯ (ED) ಪತ್ತೆಹಚ್ಚಿದೆ. ಈ ಜಾಲವು ನಕಲಿ GST ಬಿಲ್‌, ನಕಲಿ ಕಂಪನಿಗಳು, ಸುಳ್ಳು ಸಾರಿಗೆ ದಾಖಲೆಗಳು ಹಾಗೂ ಮಿಜೋರಾಂನ ಕೆಲವು ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ಹವಾಲಾ ಹಣ ವರ್ಗಾವಣೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ED ಅಧಿಕಾರಿಗಳು ಜುಲೈ 3ರಂದು ಅಸ್ಸಾಂ, ಮಿಜೋರಾಂ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳ 20 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳು, ಡೈರಿಗಳು, ಆಸ್ತಿ ದಾಖಲೆಗಳು, ₹1.30 ಕೋಟಿ ನಗದು ಹಾಗೂ 33 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ಅಕ್ರಮ ಜಾಲ ಹೇಗೆ ಕಾರ್ಯನಿರ್ವಹಿಸುತ್ತಿತ್ತು? :  ತನಿಖೆಯ ಪ್ರಕಾರ, ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಮಿಜೋರಾಂನ ಚಾಂಫೈ–ಜೋಖಾವ್ಥಾರ್ ಗಡಿ ಮಾರ್ಗದ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ನಕಲಿ GST ಬಿಲ್‌, ನಕಲಿ ಸರಬರಾಜುದಾರರು ಹಾಗೂ ಖರೀದಿದಾರರ ಹೆಸರಿನಲ್ಲಿ ದಾಖಲೆಗಳನ್ನು ಸೃಷ್ಟಿಸಿ ವಿವಿಧ ರಾಜ್ಯಗಳಿಗೆ ಸಾಗಿಸಲಾಗುತ್ತಿತ್ತು.

ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಖರೀದಿದಾರರು ಹಣವನ್ನು ಅಸ್ಸಾಂನ ಹವಾಲಾ ಜಾಲಕ್ಕೆ ಪಾವತಿಸುತ್ತಿದ್ದರು. ಅಲ್ಲಿಂದ ಹಣವನ್ನು ಮಿಜೋರಾಂ ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ತಿರುಗಿಸಿ, ಕೊನೆಯಲ್ಲಿ ಮ್ಯಾನ್ಮಾರ್‌ನ ಪೂರೈಕೆದಾರರಿಗೆ ಹವಾಲಾ ಮೂಲಕ ತಲುಪಿಸಲಾಗುತ್ತಿತ್ತು ಎಂದು ED ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಚಾಂಫೈನಲ್ಲಿ ಅಡಿಕೆ ಬೆಳೆಯೇ ಇಲ್ಲ! :ED ಪ್ರಕಾರ, ಸರ್ಕಾರಿ ಉತ್ಪಾದನಾ ಅಂಕಿಅಂಶಗಳನ್ನು ಪರಿಶೀಲಿಸಿದಾಗ ಚಾಂಫೈ ಜಿಲ್ಲೆಯಲ್ಲಿ ಸಂಬಂಧಿತ ಅವಧಿಯಲ್ಲಿ ಅಡಿಕೆ ಉತ್ಪಾದನೆ ಶೂನ್ಯವಾಗಿತ್ತು. ಆದರೂ ಅಲ್ಲಿಂದಲೇ ದೊಡ್ಡ ಪ್ರಮಾಣದಲ್ಲಿ ಅಡಿಕೆ ಸಾಗಾಟವಾಗಿದೆ ಎಂದು ದಾಖಲೆಗಳು ತೋರಿಸುತ್ತಿದ್ದು, ಇದು ವಿದೇಶಿ ಮೂಲದ ಅಡಿಕೆ ಕಳ್ಳಸಾಗಣೆಗೆ ಮತ್ತಷ್ಟು ಬಲವಾದ ಸಾಕ್ಷಿಯಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ. ತನಿಖೆ ಇನ್ನಷ್ಟು ನಡೆಯುತ್ತಿದೆ.

The Enforcement Directorate has uncovered a ₹1,500-crore India–Myanmar areca nut smuggling and money laundering network. The probe found that the syndicate allegedly used forged GST invoices, fake firms, rural bank accounts in Mizoram, and hawala channels to move illicit funds. Cash, property documents, and bank accounts have been seized or frozen as the investigation continues.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

23 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago