Advertisement
MIRROR FOCUS

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

Share

ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ವಿದೇಶಿ ಮೂಲದ ಅಡಿಕೆಯನ್ನು ಅಕ್ರಮವಾಗಿ ಸಾಗಾಟ ಮಾಡಿ ಸುಮಾರು ₹1,500 ಕೋಟಿ ಮೌಲ್ಯದ ಹಣ ವರ್ಗಾವಣೆ (ಮನಿ ಲಾಂಡರಿಂಗ್) ನಡೆಸುತ್ತಿದ್ದ ದೊಡ್ಡ ಜಾಲವನ್ನು ಜಾರಿ ನಿರ್ದೇಶನಾಲಯ (ED) ಪತ್ತೆಹಚ್ಚಿದೆ. ಈ ಜಾಲವು ನಕಲಿ GST ಬಿಲ್‌, ನಕಲಿ ಕಂಪನಿಗಳು, ಸುಳ್ಳು ಸಾರಿಗೆ ದಾಖಲೆಗಳು ಹಾಗೂ ಮಿಜೋರಾಂನ ಕೆಲವು ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ಹವಾಲಾ ಹಣ ವರ್ಗಾವಣೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ED ಅಧಿಕಾರಿಗಳು ಜುಲೈ 3ರಂದು ಅಸ್ಸಾಂ, ಮಿಜೋರಾಂ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳ 20 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳು, ಡೈರಿಗಳು, ಆಸ್ತಿ ದಾಖಲೆಗಳು, ₹1.30 ಕೋಟಿ ನಗದು ಹಾಗೂ 33 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ಅಕ್ರಮ ಜಾಲ ಹೇಗೆ ಕಾರ್ಯನಿರ್ವಹಿಸುತ್ತಿತ್ತು? :  ತನಿಖೆಯ ಪ್ರಕಾರ, ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಮಿಜೋರಾಂನ ಚಾಂಫೈ–ಜೋಖಾವ್ಥಾರ್ ಗಡಿ ಮಾರ್ಗದ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ನಕಲಿ GST ಬಿಲ್‌, ನಕಲಿ ಸರಬರಾಜುದಾರರು ಹಾಗೂ ಖರೀದಿದಾರರ ಹೆಸರಿನಲ್ಲಿ ದಾಖಲೆಗಳನ್ನು ಸೃಷ್ಟಿಸಿ ವಿವಿಧ ರಾಜ್ಯಗಳಿಗೆ ಸಾಗಿಸಲಾಗುತ್ತಿತ್ತು.

ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಖರೀದಿದಾರರು ಹಣವನ್ನು ಅಸ್ಸಾಂನ ಹವಾಲಾ ಜಾಲಕ್ಕೆ ಪಾವತಿಸುತ್ತಿದ್ದರು. ಅಲ್ಲಿಂದ ಹಣವನ್ನು ಮಿಜೋರಾಂ ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ತಿರುಗಿಸಿ, ಕೊನೆಯಲ್ಲಿ ಮ್ಯಾನ್ಮಾರ್‌ನ ಪೂರೈಕೆದಾರರಿಗೆ ಹವಾಲಾ ಮೂಲಕ ತಲುಪಿಸಲಾಗುತ್ತಿತ್ತು ಎಂದು ED ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಚಾಂಫೈನಲ್ಲಿ ಅಡಿಕೆ ಬೆಳೆಯೇ ಇಲ್ಲ! :ED ಪ್ರಕಾರ, ಸರ್ಕಾರಿ ಉತ್ಪಾದನಾ ಅಂಕಿಅಂಶಗಳನ್ನು ಪರಿಶೀಲಿಸಿದಾಗ ಚಾಂಫೈ ಜಿಲ್ಲೆಯಲ್ಲಿ ಸಂಬಂಧಿತ ಅವಧಿಯಲ್ಲಿ ಅಡಿಕೆ ಉತ್ಪಾದನೆ ಶೂನ್ಯವಾಗಿತ್ತು. ಆದರೂ ಅಲ್ಲಿಂದಲೇ ದೊಡ್ಡ ಪ್ರಮಾಣದಲ್ಲಿ ಅಡಿಕೆ ಸಾಗಾಟವಾಗಿದೆ ಎಂದು ದಾಖಲೆಗಳು ತೋರಿಸುತ್ತಿದ್ದು, ಇದು ವಿದೇಶಿ ಮೂಲದ ಅಡಿಕೆ ಕಳ್ಳಸಾಗಣೆಗೆ ಮತ್ತಷ್ಟು ಬಲವಾದ ಸಾಕ್ಷಿಯಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ. ತನಿಖೆ ಇನ್ನಷ್ಟು ನಡೆಯುತ್ತಿದೆ.

The Enforcement Directorate has uncovered a ₹1,500-crore India–Myanmar areca nut smuggling and money laundering network. The probe found that the syndicate allegedly used forged GST invoices, fake firms, rural bank accounts in Mizoram, and hawala channels to move illicit funds. Cash, property documents, and bank accounts have been seized or frozen as the investigation continues.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

17 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

18 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

22 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

22 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

23 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago