ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ವಿದೇಶಿ ಮೂಲದ ಅಡಿಕೆಯನ್ನು ಅಕ್ರಮವಾಗಿ ಸಾಗಾಟ ಮಾಡಿ ಸುಮಾರು ₹1,500 ಕೋಟಿ ಮೌಲ್ಯದ ಹಣ ವರ್ಗಾವಣೆ (ಮನಿ ಲಾಂಡರಿಂಗ್) ನಡೆಸುತ್ತಿದ್ದ ದೊಡ್ಡ ಜಾಲವನ್ನು ಜಾರಿ ನಿರ್ದೇಶನಾಲಯ (ED) ಪತ್ತೆಹಚ್ಚಿದೆ. ಈ ಜಾಲವು ನಕಲಿ GST ಬಿಲ್, ನಕಲಿ ಕಂಪನಿಗಳು, ಸುಳ್ಳು ಸಾರಿಗೆ ದಾಖಲೆಗಳು ಹಾಗೂ ಮಿಜೋರಾಂನ ಕೆಲವು ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ಹವಾಲಾ ಹಣ ವರ್ಗಾವಣೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ED ಅಧಿಕಾರಿಗಳು ಜುಲೈ 3ರಂದು ಅಸ್ಸಾಂ, ಮಿಜೋರಾಂ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳ 20 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮಹತ್ವದ ದಾಖಲೆಗಳು, ಡೈರಿಗಳು, ಆಸ್ತಿ ದಾಖಲೆಗಳು, ₹1.30 ಕೋಟಿ ನಗದು ಹಾಗೂ 33 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಅಕ್ರಮ ಜಾಲ ಹೇಗೆ ಕಾರ್ಯನಿರ್ವಹಿಸುತ್ತಿತ್ತು? : ತನಿಖೆಯ ಪ್ರಕಾರ, ಮ್ಯಾನ್ಮಾರ್ನಿಂದ ಅಡಿಕೆಯನ್ನು ಮಿಜೋರಾಂನ ಚಾಂಫೈ–ಜೋಖಾವ್ಥಾರ್ ಗಡಿ ಮಾರ್ಗದ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಬಳಿಕ ನಕಲಿ GST ಬಿಲ್, ನಕಲಿ ಸರಬರಾಜುದಾರರು ಹಾಗೂ ಖರೀದಿದಾರರ ಹೆಸರಿನಲ್ಲಿ ದಾಖಲೆಗಳನ್ನು ಸೃಷ್ಟಿಸಿ ವಿವಿಧ ರಾಜ್ಯಗಳಿಗೆ ಸಾಗಿಸಲಾಗುತ್ತಿತ್ತು.
ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಖರೀದಿದಾರರು ಹಣವನ್ನು ಅಸ್ಸಾಂನ ಹವಾಲಾ ಜಾಲಕ್ಕೆ ಪಾವತಿಸುತ್ತಿದ್ದರು. ಅಲ್ಲಿಂದ ಹಣವನ್ನು ಮಿಜೋರಾಂ ಗ್ರಾಮೀಣ ಬ್ಯಾಂಕ್ ಖಾತೆಗಳ ಮೂಲಕ ತಿರುಗಿಸಿ, ಕೊನೆಯಲ್ಲಿ ಮ್ಯಾನ್ಮಾರ್ನ ಪೂರೈಕೆದಾರರಿಗೆ ಹವಾಲಾ ಮೂಲಕ ತಲುಪಿಸಲಾಗುತ್ತಿತ್ತು ಎಂದು ED ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಚಾಂಫೈನಲ್ಲಿ ಅಡಿಕೆ ಬೆಳೆಯೇ ಇಲ್ಲ! :ED ಪ್ರಕಾರ, ಸರ್ಕಾರಿ ಉತ್ಪಾದನಾ ಅಂಕಿಅಂಶಗಳನ್ನು ಪರಿಶೀಲಿಸಿದಾಗ ಚಾಂಫೈ ಜಿಲ್ಲೆಯಲ್ಲಿ ಸಂಬಂಧಿತ ಅವಧಿಯಲ್ಲಿ ಅಡಿಕೆ ಉತ್ಪಾದನೆ ಶೂನ್ಯವಾಗಿತ್ತು. ಆದರೂ ಅಲ್ಲಿಂದಲೇ ದೊಡ್ಡ ಪ್ರಮಾಣದಲ್ಲಿ ಅಡಿಕೆ ಸಾಗಾಟವಾಗಿದೆ ಎಂದು ದಾಖಲೆಗಳು ತೋರಿಸುತ್ತಿದ್ದು, ಇದು ವಿದೇಶಿ ಮೂಲದ ಅಡಿಕೆ ಕಳ್ಳಸಾಗಣೆಗೆ ಮತ್ತಷ್ಟು ಬಲವಾದ ಸಾಕ್ಷಿಯಾಗಿದೆ ಎಂದು ತನಿಖಾ ಸಂಸ್ಥೆ ಹೇಳಿದೆ. ತನಿಖೆ ಇನ್ನಷ್ಟು ನಡೆಯುತ್ತಿದೆ.
The Enforcement Directorate has uncovered a ₹1,500-crore India–Myanmar areca nut smuggling and money laundering network. The probe found that the syndicate allegedly used forged GST invoices, fake firms, rural bank accounts in Mizoram, and hawala channels to move illicit funds. Cash, property documents, and bank accounts have been seized or frozen as the investigation continues.
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…