ಭಾರತ, ನೇಪಾಳ ಮತ್ತು ಮಾಲ್ಡೀವ್ಸ್ ನಡುವಿನ ಕೃಷಿ ಸಹಕಾರಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಶೋಧನೆ, ಸುಧಾರಿತ ಬೀಜ ತಂತ್ರಜ್ಞಾನ, ಪಶುಸಂಗೋಪನೆ ಹಾಗೂ ಹವಾಮಾನಕ್ಕೆ ಹೊಂದಿಕೊಳ್ಳುವ ಕೃಷಿ ಕ್ರಮಗಳ ಕುರಿತು ಮೂರು ದೇಶಗಳು ಸಹಕಾರ ವಿಸ್ತರಿಸುವ ಬಗ್ಗೆ ಒಪ್ಪಂದಕ್ಕೆ ಬಂದಿವೆ.
ನವದೆಹಲಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ನೇಪಾಳದ ಕೃಷಿ ಸಚಿವ ಡಾ. ಮದನ್ ಪ್ರಸಾದ್ ಪರಿಾಯರ್ ಹಾಗೂ ಮಾಲ್ಡೀವ್ಸ್ನ ಕೃಷಿ ಮತ್ತು ಪಶು ಕಲ್ಯಾಣ ರಾಜ್ಯ ಸಚಿವ ಅಹ್ಮದ್ ಹಸನ್ ದಿದಿ ಅವರೊಂದಿಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಕೃಷಿ ಸಂಶೋಧನೆಗೆ ಸಂಬಂಧಿಸಿದ ಹಳೆಯ ಒಪ್ಪಂದಗಳನ್ನು ಇನ್ನಷ್ಟು ಬಲಪಡಿಸುವುದು, ಹೊಸ ಸಂಯುಕ್ತ ಯೋಜನೆಗಳನ್ನು ರೂಪಿಸುವುದು ಹಾಗೂ ರೈತರಿಗೆ ನೇರ ಲಾಭ ತಲುಪಿಸುವ ಬಗ್ಗೆ ಗಮನ ಹರಿಸಲಾಯಿತು. ಸುಧಾರಿತ ಹಾಗೂ ಹವಾಮಾನ ಪ್ರತಿರೋಧಕ ಬೀಜಗಳನ್ನು ನೇಪಾಳಕ್ಕೆ ಪೂರೈಸಲು ಭಾರತ ಸಮ್ಮತಿಸಿದ್ದು, ಬೆಳೆ ಉತ್ಪಾದಕತೆ ಹೆಚ್ಚಿಸಲು ಇದು ಸಹಕಾರಿಯಾಗಲಿದೆ.
ಮಾಲ್ಡೀವ್ಸ್ನಂತಹ ದ್ವೀಪ ರಾಷ್ಟ್ರಗಳಿಗೆ ಅನುಕೂಲವಾಗುವಂತೆ ಮಣ್ಣು ಆರೋಗ್ಯ, ಲವಣದ ಸಮಸ್ಯೆ ಹಾಗೂ ಕಡಿಮೆ ಭೂಪ್ರದೇಶಕ್ಕೆ ಹೊಂದುವ ಕೃಷಿ ಮಾದರಿಗಳ ಬಗ್ಗೆ ಚರ್ಚೆ ನಡೆಯಿತು. ಪಶುಸಂಗೋಪನೆ ಕ್ಷೇತ್ರದಲ್ಲಿ ತಳಿಗಳ ಸುಧಾರಣೆ, ರೋಗ ನಿಯಂತ್ರಣ ಮತ್ತು ಸುಸ್ಥಿರ ಪಶುಪಾಲನಾ ಕ್ರಮಗಳಿಗೆ ಸಹಕಾರ ನೀಡುವ ಭರವಸೆಯನ್ನೂ ಭಾರತ ನೀಡಿದೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮೂಲಕ ಸಂಶೋಧನಾ ಫಲಿತಾಂಶಗಳು, ತಾಂತ್ರಿಕ ಜ್ಞಾನ ಮತ್ತು ತರಬೇತಿ ಕಾರ್ಯಕ್ರಮಗಳನ್ನು ನೇಪಾಳ ಹಾಗೂ ಮಾಲ್ಡೀವ್ಸ್ಗೆ ಹಂಚಿಕೊಳ್ಳಲಾಗುವುದು ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು.
ಈ ಮೂರು ದೇಶಗಳ ನಡುವಿನ ಕೃಷಿ ಸಹಕಾರ ದಕ್ಷಿಣ ಏಷ್ಯಾ ಹಾಗೂ ಭಾರತೀಯ ಮಹಾಸಾಗರ ಪ್ರದೇಶದಲ್ಲಿ ಆಹಾರ ಭದ್ರತೆ, ಹವಾಮಾನ ಪ್ರತಿರೋಧಕ ಕೃಷಿ ಮತ್ತು ರೈತರ ಆದಾಯ ಹೆಚ್ಚಳಕ್ಕೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಓದುಗರ ಅಭಿಪ್ರಾಯಕ್ಕೆ :
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…