Advertisement
MIRROR FOCUS

#GDP2023 | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ | ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ | 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸುವ ಸಾಧ್ಯತೆ |

Share

ಒಂದು ದೇಶದ ಆರ್ಥಿಕ ಪರಿಸ್ಥಿತಿಯನ್ನು ಜಿಡಿಪಿ#GDP ಮೂಲಕ ಅಳೆಯಲಾಗುತ್ತದೆ. ವಿಶ್ವದಾದ್ಯಂತ ಹಲವು ಅನಿಶ್ಚಿತೆಗಳ ಮಧ್ಯೆಯೂ 2023-24ರ ಹಣಕಾಸು ವರ್ಷದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಭಾರತ ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿ #Economicdevelopmentಗೆ ದಾಖಲಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ #IMF ಮಾಹಿತಿ ನೀಡಿದೆ.

ಐಎಂಎಫ್‌  ಜಿಡಿಪಿ ಮುನ್ನೋಟವನ್ನು ಬಿಡುಗಡೆ ಮಾಡಿದೆ. 2023ರಲ್ಲಿ ಭಾರತದ ಜಿಡಿಪಿ ದರ 6.3% ಇದ್ದರೆ 2024ರಲ್ಲಿ 6.3% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದೆ. ಈ ಹಿಂದೆ 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸಬಹುದು ಎಂದಿದ್ದ ಐಎಂಎಫ್‌ ಈಗ 20 ಬೇಸಿಸ್‌ ಪಾಯಿಂಟ್‌  ಏರಿಕೆ ಮಾಡಿ ವರದಿ ಬಿಡುಗಡೆ ಮಾಡಿದೆ.

 

ಭಾರತದ ಆರ್‌ಬಿಐ ಈ ಹಣಕಾಸು ವರ್ಷದಲ್ಲಿ 6.5% ಜಿಡಿಪಿ ದಾಖಲಿಸಬಹುದು ಎಂದು ಅಂದಾಜಿಸಿದೆ.  ಇದೇ ಜಿಡಿಪಿ ಪ್ರಗತಿಯನ್ನು ಕಾಯ್ದುಕೊಂಡರೆ 2026ರಲ್ಲಿ ಜಪಾನ್‌, 2027ರಲ್ಲಿ ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಬಹುದು ಎಂದು ಐಎಂಫ್‌ ಭವಿಷ್ಯ ನುಡಿದಿದೆ.  2021ರ ಹಣಕಾಸು ವರ್ಷದ ಕೊನೆಯ ಮೂರು ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿತ್ತು. ಚೀನಾದ ಜಿಡಿಪಿ ಬೆಳವಣಿಗೆ ದರವನ್ನು ಐಎಂಫ್‌ ಇಳಿಕೆ ಮಾಡಿದೆ. ಈ ಹಿಂದೆ 5.2% ಎಂದಿದ್ದ ಐಎಂಫ್‌ ಈಗ ದರವನ್ನು 5% ಇಳಿಸಿದೆ. ರಿಯಲ್‌ ಎಸ್ಟೇಟ್‌ ಕುಸಿತಗೊಂಡ ಹಿನ್ನೆಲೆಯಲ್ಲಿ ದರವನ್ನು ಇಳಿಕೆ ಮಾಡಿದೆ. 2024ರಲ್ಲಿ 4.2% ಜಿಡಿಪಿ ದಾಖಲಿಸಬಹುದು ಎಂದು ಹೇಳಿದೆ.

2023ರಲ್ಲಿ ಯಾವ ದೇಶದ ಜಿಡಿಪಿ ಎಷ್ಟು?: ಅಮೆರಿಕ 3%, ಜರ್ಮನಿ -0.5%, ಫ್ರಾನ್ಸ್‌ 1.0% ಜಪಾನ್‌ 2.0%, ಕೆನಡಾ 1.3% ಬ್ರೆಜಿಲ್‌ 3.1% ಜಿಡಿಪಿ ಪ್ರಗತಿ ಸಾಧಿಸಲಿದೆ ಎಂದು ಐಎಂಎಫ್‌ ಅಂದಾಜಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

10 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

15 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago