Advertisement
MIRROR FOCUS

#GDP2023 | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ | ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ | 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸುವ ಸಾಧ್ಯತೆ |

Share

ಒಂದು ದೇಶದ ಆರ್ಥಿಕ ಪರಿಸ್ಥಿತಿಯನ್ನು ಜಿಡಿಪಿ#GDP ಮೂಲಕ ಅಳೆಯಲಾಗುತ್ತದೆ. ವಿಶ್ವದಾದ್ಯಂತ ಹಲವು ಅನಿಶ್ಚಿತೆಗಳ ಮಧ್ಯೆಯೂ 2023-24ರ ಹಣಕಾಸು ವರ್ಷದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಭಾರತ ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿ #Economicdevelopmentಗೆ ದಾಖಲಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ #IMF ಮಾಹಿತಿ ನೀಡಿದೆ.

ಐಎಂಎಫ್‌  ಜಿಡಿಪಿ ಮುನ್ನೋಟವನ್ನು ಬಿಡುಗಡೆ ಮಾಡಿದೆ. 2023ರಲ್ಲಿ ಭಾರತದ ಜಿಡಿಪಿ ದರ 6.3% ಇದ್ದರೆ 2024ರಲ್ಲಿ 6.3% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದೆ. ಈ ಹಿಂದೆ 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸಬಹುದು ಎಂದಿದ್ದ ಐಎಂಎಫ್‌ ಈಗ 20 ಬೇಸಿಸ್‌ ಪಾಯಿಂಟ್‌  ಏರಿಕೆ ಮಾಡಿ ವರದಿ ಬಿಡುಗಡೆ ಮಾಡಿದೆ.

 

ಭಾರತದ ಆರ್‌ಬಿಐ ಈ ಹಣಕಾಸು ವರ್ಷದಲ್ಲಿ 6.5% ಜಿಡಿಪಿ ದಾಖಲಿಸಬಹುದು ಎಂದು ಅಂದಾಜಿಸಿದೆ.  ಇದೇ ಜಿಡಿಪಿ ಪ್ರಗತಿಯನ್ನು ಕಾಯ್ದುಕೊಂಡರೆ 2026ರಲ್ಲಿ ಜಪಾನ್‌, 2027ರಲ್ಲಿ ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಬಹುದು ಎಂದು ಐಎಂಫ್‌ ಭವಿಷ್ಯ ನುಡಿದಿದೆ.  2021ರ ಹಣಕಾಸು ವರ್ಷದ ಕೊನೆಯ ಮೂರು ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿತ್ತು. ಚೀನಾದ ಜಿಡಿಪಿ ಬೆಳವಣಿಗೆ ದರವನ್ನು ಐಎಂಫ್‌ ಇಳಿಕೆ ಮಾಡಿದೆ. ಈ ಹಿಂದೆ 5.2% ಎಂದಿದ್ದ ಐಎಂಫ್‌ ಈಗ ದರವನ್ನು 5% ಇಳಿಸಿದೆ. ರಿಯಲ್‌ ಎಸ್ಟೇಟ್‌ ಕುಸಿತಗೊಂಡ ಹಿನ್ನೆಲೆಯಲ್ಲಿ ದರವನ್ನು ಇಳಿಕೆ ಮಾಡಿದೆ. 2024ರಲ್ಲಿ 4.2% ಜಿಡಿಪಿ ದಾಖಲಿಸಬಹುದು ಎಂದು ಹೇಳಿದೆ.

2023ರಲ್ಲಿ ಯಾವ ದೇಶದ ಜಿಡಿಪಿ ಎಷ್ಟು?: ಅಮೆರಿಕ 3%, ಜರ್ಮನಿ -0.5%, ಫ್ರಾನ್ಸ್‌ 1.0% ಜಪಾನ್‌ 2.0%, ಕೆನಡಾ 1.3% ಬ್ರೆಜಿಲ್‌ 3.1% ಜಿಡಿಪಿ ಪ್ರಗತಿ ಸಾಧಿಸಲಿದೆ ಎಂದು ಐಎಂಎಫ್‌ ಅಂದಾಜಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

50 minutes ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 hour ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

9 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

10 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

10 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

10 hours ago