Advertisement
MIRROR FOCUS

#GDP2023 | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ | ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ | 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸುವ ಸಾಧ್ಯತೆ |

Share

ಒಂದು ದೇಶದ ಆರ್ಥಿಕ ಪರಿಸ್ಥಿತಿಯನ್ನು ಜಿಡಿಪಿ#GDP ಮೂಲಕ ಅಳೆಯಲಾಗುತ್ತದೆ. ವಿಶ್ವದಾದ್ಯಂತ ಹಲವು ಅನಿಶ್ಚಿತೆಗಳ ಮಧ್ಯೆಯೂ 2023-24ರ ಹಣಕಾಸು ವರ್ಷದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಭಾರತ ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿ #Economicdevelopmentಗೆ ದಾಖಲಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ #IMF ಮಾಹಿತಿ ನೀಡಿದೆ.

Advertisement
Advertisement

ಐಎಂಎಫ್‌  ಜಿಡಿಪಿ ಮುನ್ನೋಟವನ್ನು ಬಿಡುಗಡೆ ಮಾಡಿದೆ. 2023ರಲ್ಲಿ ಭಾರತದ ಜಿಡಿಪಿ ದರ 6.3% ಇದ್ದರೆ 2024ರಲ್ಲಿ 6.3% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದೆ. ಈ ಹಿಂದೆ 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸಬಹುದು ಎಂದಿದ್ದ ಐಎಂಎಫ್‌ ಈಗ 20 ಬೇಸಿಸ್‌ ಪಾಯಿಂಟ್‌  ಏರಿಕೆ ಮಾಡಿ ವರದಿ ಬಿಡುಗಡೆ ಮಾಡಿದೆ.

Advertisement

 

ಭಾರತದ ಆರ್‌ಬಿಐ ಈ ಹಣಕಾಸು ವರ್ಷದಲ್ಲಿ 6.5% ಜಿಡಿಪಿ ದಾಖಲಿಸಬಹುದು ಎಂದು ಅಂದಾಜಿಸಿದೆ.  ಇದೇ ಜಿಡಿಪಿ ಪ್ರಗತಿಯನ್ನು ಕಾಯ್ದುಕೊಂಡರೆ 2026ರಲ್ಲಿ ಜಪಾನ್‌, 2027ರಲ್ಲಿ ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಬಹುದು ಎಂದು ಐಎಂಫ್‌ ಭವಿಷ್ಯ ನುಡಿದಿದೆ.  2021ರ ಹಣಕಾಸು ವರ್ಷದ ಕೊನೆಯ ಮೂರು ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿತ್ತು. ಚೀನಾದ ಜಿಡಿಪಿ ಬೆಳವಣಿಗೆ ದರವನ್ನು ಐಎಂಫ್‌ ಇಳಿಕೆ ಮಾಡಿದೆ. ಈ ಹಿಂದೆ 5.2% ಎಂದಿದ್ದ ಐಎಂಫ್‌ ಈಗ ದರವನ್ನು 5% ಇಳಿಸಿದೆ. ರಿಯಲ್‌ ಎಸ್ಟೇಟ್‌ ಕುಸಿತಗೊಂಡ ಹಿನ್ನೆಲೆಯಲ್ಲಿ ದರವನ್ನು ಇಳಿಕೆ ಮಾಡಿದೆ. 2024ರಲ್ಲಿ 4.2% ಜಿಡಿಪಿ ದಾಖಲಿಸಬಹುದು ಎಂದು ಹೇಳಿದೆ.

Advertisement

2023ರಲ್ಲಿ ಯಾವ ದೇಶದ ಜಿಡಿಪಿ ಎಷ್ಟು?: ಅಮೆರಿಕ 3%, ಜರ್ಮನಿ -0.5%, ಫ್ರಾನ್ಸ್‌ 1.0% ಜಪಾನ್‌ 2.0%, ಕೆನಡಾ 1.3% ಬ್ರೆಜಿಲ್‌ 3.1% ಜಿಡಿಪಿ ಪ್ರಗತಿ ಸಾಧಿಸಲಿದೆ ಎಂದು ಐಎಂಎಫ್‌ ಅಂದಾಜಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

13 mins ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

3 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

8 hours ago

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

11 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

11 hours ago