MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

Advertisement

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

9 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

10 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

10 hours ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

10 hours ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

10 hours ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

10 hours ago