Advertisement
MIRROR FOCUS

ಭಾರತದಲ್ಲಿ ಬೆಳೆಯುತ್ತಿರುವ ಪಾನ್‌ ಮಸಾಲಾ ಉದ್ಯಮ | ಅಡಿಕೆಗೆ ಹೆಚ್ಚಲಿದೆ ಬೇಡಿಕೆ |

Share

ಭಾರತದಲ್ಲಿ ಪಾನ್‌ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ಭಾರತದ ಪಾನ್‌ ಮಸಾಲಾ ಮಾರುಕಟ್ಟೆ ಸಮೀಕ್ಷೆ ಹೇಳಿದೆ. ಹೀಗಾಗಿ ಅಡಿಕೆ ಬೇಡಿಕೆಯೂ ಹೆಚ್ಚಲಿದೆ. 

ಎಕ್ಸ್‌ಪರ್ಟ್ ಮಾರ್ಕೆಟ್ ರಿಸರ್ಚ್‌ ಇದರ ವರದಿ ಪ್ರಕಾರ ಭಾರತದಲ್ಲಿ ಪಾನ್‌ ಮಸಾಲಾ ಮಾರುಕಟ್ಟೆಯು ಏರುಗತಿಯಲ್ಲಿದೆ. ಮುಂದಿನ 5 ವರ್ಷದಲ್ಲಿ ಈ ಬೇಡಿಕೆಯು ಇರಲಿದೆ. ಅನೇಕ ರಾಜ್ಯಗಳಲ್ಲಿ ಈ ಬೇಡಿಕೆ ಇದೆ. ಅದರಲ್ಲೂ ಭಾರತದ ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಪಾನ್‌ ಮಸಾಲಾಗಳಿಗೆ ಬೇಡಿಕೆ ಹೆಚ್ಚಿದೆ. ದೇಶಾದ್ಯಂತ ಹಲವಾರು ಸುವಾಸನೆಗಳಲ್ಲಿ ಪಾನ್‌ ಮಸಾಲಾ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಿದೆ. ಮಸಾಲೆಯುಕ್ತ ಊಟದ ನಂತರ  ಸೇವನೆಯ ಮೌತ್ ಫ್ರೆಶ್ನರ್ ಪಾನ್ ಮಸಾಲಾ ಜನಪ್ರಿಯತೆಯು ಮಾರುಕಟ್ಟೆಯಲ್ಲಿ ಈಗ ಪ್ರಮುಖ ಅಂಶವಾಗಿದೆ ಎಂದು ನಿರೀಕ್ಷಿಸಲಾಗಿದೆ.

ಉತ್ತರ ಪ್ರದೇಶ ಮತ್ತು ಬಿಹಾರದಂತಹ  ರಾಜ್ಯಗಳು ಪಾನ್ ಮಸಾಲದ ಅತಿ ಹೆಚ್ಚು ಗ್ರಾಹಕರು. ಇಲ್ಲಿ ಮಸಾಲಾ ಉತ್ಪನ್ನವನ್ನು ಸಾಂಪ್ರದಾಯಿಕವಾಗಿ ಸೇವಿಸಲಾಗುತ್ತದೆ. ಈ ರಾಜ್ಯಗಳಲ್ಲಿನ ಸ್ಟಾಲ್‌ಗಳಲ್ಲಿ ಪಾನ್ ಮಸಾಲಾ ಸುಲಭವಾಗಿ ಲಭ್ಯವಾಗುವುದರಿಂದ ಮುಂಬರುವ ವರ್ಷಗಳಲ್ಲಿ ಉತ್ಪನ್ನದ ಬೇಡಿಕೆ ಹೆಚ್ಚಿಸುವ ನಿರೀಕ್ಷೆಯಿದೆ. ಪಾನ್‌ ಮಸಾಲಾದಲ್ಲಿ ಅಡಿಕೆಯೂ ಒಂದು ಪ್ರಮುಖ ವಸ್ತುವಾದ್ದರಿಂದ ಅಡಿಕೆಯ ಬೇಡಿಕೆ ಇನ್ನಷ್ಟು ಹೆಚ್ಚಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

11 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

18 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

18 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago