ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ

September 18, 2025
5:59 AM

ಭಾರತದಾದ್ಯಂತ ಬಿಎಸ್‌ಎನ್‌ಎಲ್‌ನ ಮೊಬೈಲ್ ಸಂಪರ್ಕವನ್ನು ವಿಸ್ತರಿಸಲು ಅಂಚೆ ಇಲಾಖೆ  ಮತ್ತು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)  ನವದೆಹಲಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿವೆ. ಡಿಜಿಟಲ್ ಅಂತರವನ್ನು ಕಡಿಮೆ ಮಾಡುವುದು, ಗ್ರಾಮೀಣ ಕುಟುಂಬಗಳನ್ನು ಮೊಬೈಲ್ ಸೇವೆಗಳೊಂದಿಗೆ ಸಬಲೀಕರಣಗೊಳಿಸುವುದು ಮತ್ತು ಆರ್ಥಿಕ ಸೇರ್ಪಡೆ , ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಡಿಜಿಟಲ್ ಇಂಡಿಯಾದ  ಗುರಿಗಳನ್ನು ತಲುಪಲು ಈ ಒಪ್ಪಂದದ ಉದ್ದೇಶವಾಗಿದೆ.

ಈ ಒಪ್ಪಂದವು ಬಿಎಸ್‌ಎನ್‌ಎಲ್‌ನ ಟೆಲಿಕಾಂ ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು ಉದ್ದೇಶವಾಗಿದೆ. ವಿಶೇಷವಾಗಿ ದೇಶದ ಗ್ರಾಮೀಣ  ಭಾಗಗಳ ನಾಗರಿಕರಿಗೆ. ಇದರ ಅಡಿಯಲ್ಲಿ, ಅಂಚೆ ಇಲಾಖೆಯು ದೇಶಾದ್ಯಂತ ಬಿಎಸ್‌ಎನ್‌ಎಲ್ ಸಿಮ್ ಕಾರ್ಡ್‌ಗಳ ಮಾರಾಟಕ್ಕಾಗಿ ತನ್ನ 1.65 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳ ಅಂಚೆ ಜಾಲವನ್ನು ಬಳಸಿಕೊಳ್ಳಲಿದೆ ಮತ್ತು ನಗರ ಮತ್ತು ಗ್ರಾಮೀಣ  ಪ್ರದೇಶಗಳಲ್ಲಿ ತನ್ನ ಜಾಲವನ್ನು ಹೆಚ್ಚಿಸಲು ಬಿಎಸ್‌ಎನ್‌ಎಲ್‌ ಉದ್ದೇಶಿಸಿದೆ. ಅಂಚೆ ಇಲಾಖೆಯ ಪರವಾಗಿ  ಜನರಲ್ ಮ್ಯಾನೇಜರ್  ಮನೀಷಾ ಬನ್ಸಾಲ್ ಬಾದಲ್ ಮತ್ತು ಬಿಎಸ್‌ಎನ್‌ಎಲ್‌ನ ಪ್ರಧಾನ ಜನರಲ್ ಮ್ಯಾನೇಜರ್ ದೀಪಕ್ ಗರ್ಗ್ ಅವರು ಈ ಒಪ್ಪಂದಕ್ಕೆ  ಸಹಿ ಹಾಕಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

ಬಿಎಸ್ಎನ್ಎಲ್ ಸೇವೆಗಳು ದೇಶದ ಮೂಲೆ ಮೂಲೆಗಳಲ್ಲಿ ಲಭ್ಯವಿರುತ್ತವೆ, ವಿಶೇಷವಾಗಿ ಗ್ರಾಮೀಣ ಮತ್ತು ಸೌಲಭ್ಯ ವಂಚಿತ ಪ್ರದೇಶಗಳಲ್ಲಿನ ನಾಗರಿಕರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಮೊಬೈಲ್ ಸೇವೆಗಳನ್ನು ಅನುಕೂಲಕರವಾಗಿ ಪಡೆಯಲು ಸಹಾಯ ಮಾಡಿಕೊಡುತ್ತದೆ  ಎಂದು ಬಿಎಸ್ಎನ್ಎಲ್ ಪ್ರಧಾನ ಮಹಾನಿರ್ದೇಶಕ  ದೀಪಕ್ ಗರ್ಗ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror