Advertisement
MIRROR FOCUS

ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ

Share

ಭಾರತದಾದ್ಯಂತ ಬಿಎಸ್‌ಎನ್‌ಎಲ್‌ನ ಮೊಬೈಲ್ ಸಂಪರ್ಕವನ್ನು ವಿಸ್ತರಿಸಲು ಅಂಚೆ ಇಲಾಖೆ  ಮತ್ತು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)  ನವದೆಹಲಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿವೆ. ಡಿಜಿಟಲ್ ಅಂತರವನ್ನು ಕಡಿಮೆ ಮಾಡುವುದು, ಗ್ರಾಮೀಣ ಕುಟುಂಬಗಳನ್ನು ಮೊಬೈಲ್ ಸೇವೆಗಳೊಂದಿಗೆ ಸಬಲೀಕರಣಗೊಳಿಸುವುದು ಮತ್ತು ಆರ್ಥಿಕ ಸೇರ್ಪಡೆ , ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಡಿಜಿಟಲ್ ಇಂಡಿಯಾದ  ಗುರಿಗಳನ್ನು ತಲುಪಲು ಈ ಒಪ್ಪಂದದ ಉದ್ದೇಶವಾಗಿದೆ.

ಈ ಒಪ್ಪಂದವು ಬಿಎಸ್‌ಎನ್‌ಎಲ್‌ನ ಟೆಲಿಕಾಂ ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು ಉದ್ದೇಶವಾಗಿದೆ. ವಿಶೇಷವಾಗಿ ದೇಶದ ಗ್ರಾಮೀಣ  ಭಾಗಗಳ ನಾಗರಿಕರಿಗೆ. ಇದರ ಅಡಿಯಲ್ಲಿ, ಅಂಚೆ ಇಲಾಖೆಯು ದೇಶಾದ್ಯಂತ ಬಿಎಸ್‌ಎನ್‌ಎಲ್ ಸಿಮ್ ಕಾರ್ಡ್‌ಗಳ ಮಾರಾಟಕ್ಕಾಗಿ ತನ್ನ 1.65 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳ ಅಂಚೆ ಜಾಲವನ್ನು ಬಳಸಿಕೊಳ್ಳಲಿದೆ ಮತ್ತು ನಗರ ಮತ್ತು ಗ್ರಾಮೀಣ  ಪ್ರದೇಶಗಳಲ್ಲಿ ತನ್ನ ಜಾಲವನ್ನು ಹೆಚ್ಚಿಸಲು ಬಿಎಸ್‌ಎನ್‌ಎಲ್‌ ಉದ್ದೇಶಿಸಿದೆ. ಅಂಚೆ ಇಲಾಖೆಯ ಪರವಾಗಿ  ಜನರಲ್ ಮ್ಯಾನೇಜರ್  ಮನೀಷಾ ಬನ್ಸಾಲ್ ಬಾದಲ್ ಮತ್ತು ಬಿಎಸ್‌ಎನ್‌ಎಲ್‌ನ ಪ್ರಧಾನ ಜನರಲ್ ಮ್ಯಾನೇಜರ್ ದೀಪಕ್ ಗರ್ಗ್ ಅವರು ಈ ಒಪ್ಪಂದಕ್ಕೆ  ಸಹಿ ಹಾಕಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

ಬಿಎಸ್ಎನ್ಎಲ್ ಸೇವೆಗಳು ದೇಶದ ಮೂಲೆ ಮೂಲೆಗಳಲ್ಲಿ ಲಭ್ಯವಿರುತ್ತವೆ, ವಿಶೇಷವಾಗಿ ಗ್ರಾಮೀಣ ಮತ್ತು ಸೌಲಭ್ಯ ವಂಚಿತ ಪ್ರದೇಶಗಳಲ್ಲಿನ ನಾಗರಿಕರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಮೊಬೈಲ್ ಸೇವೆಗಳನ್ನು ಅನುಕೂಲಕರವಾಗಿ ಪಡೆಯಲು ಸಹಾಯ ಮಾಡಿಕೊಡುತ್ತದೆ  ಎಂದು ಬಿಎಸ್ಎನ್ಎಲ್ ಪ್ರಧಾನ ಮಹಾನಿರ್ದೇಶಕ  ದೀಪಕ್ ಗರ್ಗ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

1 day ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago