Advertisement
MIRROR FOCUS

ಗ್ರಾಮೀಣ ಭಾಗದಲ್ಲಿ ಮೊಬೈಲ್‌ ಸಂಪರ್ಕ ಹೆಚ್ಚಿಸಲು ಅಂಚೆ ಇಲಾಖೆ ಹಾಗೂ ಬಿಎಸ್‌ಎನ್‌ಎಲ್‌ ಒಪ್ಪಂದ

Share

ಭಾರತದಾದ್ಯಂತ ಬಿಎಸ್‌ಎನ್‌ಎಲ್‌ನ ಮೊಬೈಲ್ ಸಂಪರ್ಕವನ್ನು ವಿಸ್ತರಿಸಲು ಅಂಚೆ ಇಲಾಖೆ  ಮತ್ತು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)  ನವದೆಹಲಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿವೆ. ಡಿಜಿಟಲ್ ಅಂತರವನ್ನು ಕಡಿಮೆ ಮಾಡುವುದು, ಗ್ರಾಮೀಣ ಕುಟುಂಬಗಳನ್ನು ಮೊಬೈಲ್ ಸೇವೆಗಳೊಂದಿಗೆ ಸಬಲೀಕರಣಗೊಳಿಸುವುದು ಮತ್ತು ಆರ್ಥಿಕ ಸೇರ್ಪಡೆ , ಸಾಮಾಜಿಕ-ಆರ್ಥಿಕ ಅಭಿವೃದ್ಧಿಗಾಗಿ ಡಿಜಿಟಲ್ ಇಂಡಿಯಾದ  ಗುರಿಗಳನ್ನು ತಲುಪಲು ಈ ಒಪ್ಪಂದದ ಉದ್ದೇಶವಾಗಿದೆ.

ಈ ಒಪ್ಪಂದವು ಬಿಎಸ್‌ಎನ್‌ಎಲ್‌ನ ಟೆಲಿಕಾಂ ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವುದು ಉದ್ದೇಶವಾಗಿದೆ. ವಿಶೇಷವಾಗಿ ದೇಶದ ಗ್ರಾಮೀಣ  ಭಾಗಗಳ ನಾಗರಿಕರಿಗೆ. ಇದರ ಅಡಿಯಲ್ಲಿ, ಅಂಚೆ ಇಲಾಖೆಯು ದೇಶಾದ್ಯಂತ ಬಿಎಸ್‌ಎನ್‌ಎಲ್ ಸಿಮ್ ಕಾರ್ಡ್‌ಗಳ ಮಾರಾಟಕ್ಕಾಗಿ ತನ್ನ 1.65 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳ ಅಂಚೆ ಜಾಲವನ್ನು ಬಳಸಿಕೊಳ್ಳಲಿದೆ ಮತ್ತು ನಗರ ಮತ್ತು ಗ್ರಾಮೀಣ  ಪ್ರದೇಶಗಳಲ್ಲಿ ತನ್ನ ಜಾಲವನ್ನು ಹೆಚ್ಚಿಸಲು ಬಿಎಸ್‌ಎನ್‌ಎಲ್‌ ಉದ್ದೇಶಿಸಿದೆ. ಅಂಚೆ ಇಲಾಖೆಯ ಪರವಾಗಿ  ಜನರಲ್ ಮ್ಯಾನೇಜರ್  ಮನೀಷಾ ಬನ್ಸಾಲ್ ಬಾದಲ್ ಮತ್ತು ಬಿಎಸ್‌ಎನ್‌ಎಲ್‌ನ ಪ್ರಧಾನ ಜನರಲ್ ಮ್ಯಾನೇಜರ್ ದೀಪಕ್ ಗರ್ಗ್ ಅವರು ಈ ಒಪ್ಪಂದಕ್ಕೆ  ಸಹಿ ಹಾಕಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.. 

ಬಿಎಸ್ಎನ್ಎಲ್ ಸೇವೆಗಳು ದೇಶದ ಮೂಲೆ ಮೂಲೆಗಳಲ್ಲಿ ಲಭ್ಯವಿರುತ್ತವೆ, ವಿಶೇಷವಾಗಿ ಗ್ರಾಮೀಣ ಮತ್ತು ಸೌಲಭ್ಯ ವಂಚಿತ ಪ್ರದೇಶಗಳಲ್ಲಿನ ನಾಗರಿಕರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಮೊಬೈಲ್ ಸೇವೆಗಳನ್ನು ಅನುಕೂಲಕರವಾಗಿ ಪಡೆಯಲು ಸಹಾಯ ಮಾಡಿಕೊಡುತ್ತದೆ  ಎಂದು ಬಿಎಸ್ಎನ್ಎಲ್ ಪ್ರಧಾನ ಮಹಾನಿರ್ದೇಶಕ  ದೀಪಕ್ ಗರ್ಗ್ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

36 minutes ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago