Advertisement
ಸುದ್ದಿಗಳು

ಅಂಚೆ ಇಲಾಖೆ ಭಾವನೆಗಳ ಸೇತುವೆ : ಜಿತೇಂದ್ರ ಗುಪ್ತಾ

Share

ಭಾರತದ ಪ್ರದರ್ಶನ ಕಲೆಗಳ ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ಅಖಿಲ ಭಾರತೀಯ ಅಂಚೆ ಸಾಂಸ್ಕೃತಿಕ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದು ಅಂಚೆ ಸೇವೆಗಳ ಮಹಾನಿರ್ದೇಶಕ ಜಿತೇಂದ್ರ ಗುಪ್ತಾ ತಿಳಿಸಿದ್ದಾರೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ನಡೆದ 38ನೇ ಅಖಿಲ ಭಾರತೀಯ ಅಂಚೆ ಸಾಂಸ್ಕೃತಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಚೆ ಇಲಾಖೆ ಕೇವಲ ಪತ್ರಗಳನ್ನು ಸಾಗಿಸುವ ಸೇವೆಗೆ ಸೀಮಿತವಲ್ಲ, ಅದು ಜನರ ಭಾವನೆಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು. ಉತ್ತಮ ಸೇವೆಗೆ ಮತ್ತೊಂದು ಹೆಸರಾಗಿರುವ ಅಂಚೆ ಇಲಾಖೆ, ಸಾಮಾಜಿಕ ಮಾಧ್ಯಮಗಳ ಪ್ರಭಾವದ ನಡುವೆಯೂ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಪ್ರಕಾಶ್ ಮಾತನಾಡಿ, ಭಾರತದ ಕಲೆ ಮತ್ತು ಸಂಸ್ಕೃತಿ ಜಗತ್ತಿನಾದ್ಯಂತ ಗೌರವಕ್ಕೆ ಪಾತ್ರವಾಗಿದೆ ಎಂದು ತಿಳಿಸಿದರು. ಅಂಚೆ ಇಲಾಖೆ ಈ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನದ ನೆನಪಿಗಾಗಿ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ದೇಶದ ವಿವಿಧ ಭಾಗಗಳಿಂದ ಅಂಚೆ ಇಲಾಖೆಯ ಸಿಬ್ಬಂದಿ ಮತ್ತು ಕಲಾವಿದರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

Director General of Postal Services Jitendra Gupta said that India Post carries not just letters but emotions, while inaugurating the 38th All India Postal Cultural Conference in Mysuru. He highlighted the department’s continued relevance despite social media growth and its role in promoting India’s cultural diversity.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

3 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

3 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

6 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

11 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

11 hours ago