ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

March 18, 2026
6:44 AM
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಸೇರಿದಂತೆ ವಿವಿಧ ಕ್ರಮಗಳಿಂದ ವಿದ್ಯುತ್ ಕೊರತೆ ಸಮಸ್ಯೆ ಪರಿಹಾರವಾಗುತ್ತಿದೆ ಎನ್ನಲಾಗಿದೆ.

ಏಪ್ರಿಲ್‌ 2014ರಿಂದ ದೇಶದಲ್ಲಿ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸುವ ಮೂಲಕ ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸಿದೆ ಎಂದು ಕೇಂದ್ರ ವಿದ್ಯುತ್ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಸಚಿವರ ಪ್ರಕಾರ, ಕಳೆದ ದಶಕದಲ್ಲಿ 296 ಗಿಗಾ ವ್ಯಾಟ್ ಹೊಸ ಉತ್ಪಾದನಾ ಸಾಮರ್ಥ್ಯವನ್ನು ಸೇರ್ಪಡೆಗೊಳಿಸಲಾಗಿದ್ದು, ಇದರೊಂದಿಗೆ ದೇಶದ ಒಟ್ಟು ಸ್ಥಾಪಿತ ವಿದ್ಯುತ್ ಉತ್ಪಾದನಾ ಸಾಮರ್ಥ್ಯವು ಈಗ 520 ಗಿಗಾ ವ್ಯಾಟ್‌ಗಿಂತ ಹೆಚ್ಚಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಸಾಕಷ್ಟು ವಿದ್ಯುತ್ ಲಭ್ಯತೆ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನೊಂದೆಡೆ, ವಿದ್ಯುತ್‌ ವಿತರಣಾ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಜಾರಿಗೊಂಡಿರುವ ಪುನಃಸ್ಥಾಪಿತ ವಿತರಣಾ ವಲಯ ಯೋಜನೆ (RDSS) ಅಡಿಯಲ್ಲಿ ಈಗಾಗಲೇ 4 ಕೋಟಿ 55 ಲಕ್ಷ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಲಾಗಿದೆ. ವಿವಿಧ ಯೋಜನೆಗಳ ಒಟ್ಟಾರೆ ಲೆಕ್ಕದಲ್ಲಿ ದೇಶಾದ್ಯಂತ 5 ಕೋಟಿ 97 ಲಕ್ಷ ಸ್ಮಾರ್ಟ್ ಮೀಟರ್‌ಗಳು ಅಳವಡಿಕೆಯಾಗಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವೃದ್ಧಿ ಹಾಗೂ ಸ್ಮಾರ್ಟ್‌ ಮೀಟರ್‌ಗಳ ಅಳವಡಿಕೆಯಿಂದ ವಿದ್ಯುತ್‌ ಬಳಕೆ ನಿಯಂತ್ರಣ, ನಷ್ಟ ಕಡಿತ ಮತ್ತು ಸೇವಾ ಗುಣಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India has added 296 GW of new power generation capacity since April 2014, taking the total installed capacity to over 520 GW, effectively addressing the country’s power shortage, Union Minister Shripad Naik informed Parliament. Additionally, nearly 59.7 million smart meters have been installed nationwide under various schemes to improve power distribution efficiency.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror