ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

March 11, 2026
7:08 AM
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದ್ದಾರೆ. ಭತ್ತ ಉತ್ಪಾದನೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿ ಜಾಗತಿಕ ಅಗ್ರಸ್ಥಾನಕ್ಕೇರಿದೆ ಎಂದರು.

ಸರ್ಕಾರದ ಕೃಷಿ ನೀತಿಯ ಪರಿಣಾಮವಾಗಿ ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲೆ ಮಟ್ಟದ ಆಹಾರಧಾನ್ಯ ಉತ್ಪಾದನೆ ಸಾಧಿಸಲಾಗಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದ್ದಾರೆ.

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ದೇಶದಲ್ಲಿ ಒಟ್ಟು 357 ದಶಲಕ್ಷ ಟನ್ ಆಹಾರಧಾನ್ಯ ಉತ್ಪಾದನೆ ಸಾಧನೆಯಾಗಿದ್ದು, ಇದು ಹೊಸ ದಾಖಲೆಯಾಗಿದೆ ಎಂದು ಹೇಳಿದರು.

Advertisement

ಭತ್ತ ಉತ್ಪಾದನೆಯಲ್ಲಿ ಭಾರತ ಮಹತ್ವದ ಸಾಧನೆ ಮಾಡಿದ್ದು, 15 ಕೋಟಿ ಟನ್ ಭತ್ತ ಉತ್ಪಾದನೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ಜಾಗತಿಕ ಅಗ್ರಸ್ಥಾನಕ್ಕೇರಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಧನಧಾನ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದಾಗಿ ಭತ್ತ ಮಾತ್ರವಲ್ಲದೆ ಬೇಳೆಕಾಳು, ಎಣ್ಣೆಬೀಜ, ಸೋಯಾಬಿನ್ ಸೇರಿದಂತೆ ಹಲವು ಬೆಳೆಗಳ ಉತ್ಪಾದನೆ ಹೆಚ್ಚಳವಾಗಿದೆ ಎಂದು ಸಚಿವರು ಹೇಳಿದರು.

Advertisement

ಕಳೆದ ಹತ್ತು ವರ್ಷಗಳಲ್ಲಿ ದೇಶದ ಆಹಾರಧಾನ್ಯ ಉತ್ಪಾದನೆ 46 ಶೇಕಡಕ್ಕಿಂತ ಹೆಚ್ಚು ಏರಿಕೆ ಕಂಡಿದ್ದು, ದೇಶದ ಆಹಾರದ ಭಂಡಾರಗಳು ಸಮೃದ್ಧವಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿ ಅಭಿವೃದ್ಧಿಗೆ ಮೂರು ಮುಖ್ಯ ಗುರಿಗಳು :  ಕೃಷಿಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಮೂರು ಪ್ರಮುಖ ಗುರಿಗಳನ್ನು ಹೊಂದಿದೆ ಎಂದು ಸಚಿವರು ಹೇಳಿದರು.

Advertisement
  • ಆಹಾರ ಭದ್ರತೆ

  • ರೈತರ ಹಿತರಕ್ಷಣೆ

    Advertisement
  • ಪೌಷ್ಟಿಕ ಆಹಾರ ಒದಗಿಸುವುದು

ಈ ಗುರಿಗಳನ್ನು ಸಾಧಿಸಲು ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

Advertisement

ರೈತರಿಗೆ ವಿಶೇಷ ಗುರುತಿನ ಚೀಟಿ :  ದೇಶದ ರೈತರಿಗೆ ಪ್ರತ್ಯೇಕ ರೈತರ ಗುರುತಿನ ಚೀಟಿ ನೀಡುವ ಕಾರ್ಯ ನಡೆಯುತ್ತಿದ್ದು, ಈ ಚೀಟಿಯಲ್ಲಿ

  • ಕೃಷಿ ಜಮೀನಿನ ವಿಸ್ತೀರ್ಣ

    Advertisement
  • ಕುಟುಂಬ ಸದಸ್ಯರ ವಿವರ

  • ಬೆಳೆ ಮಾಹಿತಿ

    Advertisement

ಹಾಗೂ ರೈತರಿಗೆ ಸಂಬಂಧಿಸಿದ ಇತರ ಮಾಹಿತಿಗಳು ಸೇರಿಸಲ್ಪಡಲಿವೆ ಎಂದು ತಿಳಿಸಿದರು.

ರೈತರಿಗೆ ಸಹಾಯಧನ :  ರೈತರಿಗೆ ಒಟ್ಟು 1 ಲಕ್ಷ 86 ಸಾವಿರ ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

Advertisement

ಕೃಷಿ ಉತ್ಪಾದನೆಯಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಉತ್ಪಾದನೆಯಿರುವ ಜಿಲ್ಲೆಗಳಲ್ಲಿ ವಿಶೇಷ ಯೋಜನೆ ಜಾರಿಗೊಳಿಸಲಾಗಿದೆ. ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಲ್ಲಿದ್ದು, 96 ಜಿಲ್ಲೆಗಳು ಉತ್ತಮ ಪ್ರಗತಿ ಸಾಧಿಸಿವೆ ಎಂದು ಸಚಿವರು ತಿಳಿಸಿದರು.

ಆದರೆ ಪಶ್ಚಿಮ ಬಂಗಾಳ ಸರ್ಕಾರದ ಅಸಹಕಾರದಿಂದಾಗಿ ನಾಲ್ಕು ಜಿಲ್ಲೆಗಳು ಈ ಯೋಜನೆಯಿಂದ ವಂಚಿತವಾಗಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

Advertisement

India has achieved a record 357 million tonnes of food grain production in the last ten years under the NDA government’s agricultural policies, Agriculture Minister Shivraj Singh Chouhan told the Lok Sabha. He also said India has overtaken China in rice production with 150 million tonnes, while several government schemes have boosted production of pulses, oilseeds, and other crops.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror