#GDP | ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಉಳಿದ ಭಾರತ | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ |

September 1, 2023
12:41 PM
ಭಾರತ  7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು ಹಿಂದಿಕ್ಕಿದೆ. ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

2023-24ರ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಭಾರತವು ಶೇ.7.8ರ ಆರ್ಥಿಕ ಬೆಳವಣಿಗೆ ದರವನ್ನು ದಾಖಲಿಸಿದೆ. ಇದರೊಟ್ಟಿಗೆ, ವೇಗವಾಗಿ ಬೆಳೆಯುತ್ತಿರುವ ‘ದೊಡ್ಡ ಆರ್ಥಿಕತೆ’ಯ ದೇಶವಾಗಿ ಮತ್ತೆ ಹೊರಹೊಮ್ಮಿದೆ. ಕೃಷಿ ಮತ್ತು ಹಣಕಾಸು ಕ್ಷೇತ್ರಗಳಲ್ಲಿನ ಉತ್ತಮ ಕಾರ್ಯಕ್ಷಮತೆಯಿಂದಾಗಿ ಜಿಡಿಪಿ ವೃದ್ಧಿಯಾಗಿದೆ.

Advertisement
Advertisement

ಭಾರತ  7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು#China ಹಿಂದಿಕ್ಕಿದೆ. ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ#WorldFastestEconomicGrowth ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

2022-23ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ13.1% ಜಿಡಿಪಿ (GDP) ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 6.1% ರಷ್ಟು ಜಿಡಿಪಿ ದಾಖಲಾಗಿತ್ತು. ಹಣಕಾಸು, ರಿಯಲ್ ಎಸ್ಟೇಟ್ ವಲಯ 12.2% ಬೆಳವಣಿಗೆ ಸಾಧಿಸಿದೆ. ಕೃಷಿ 3.5%, ಉತ್ಪಾದನಾ ವಲಯ 4.7%, ನಿರ್ಮಾಣ 7.9%, ವ್ಯಾಪಾರ ಕ್ಷೇತ್ರ 9.2% ಬೆಳವಣಿಗೆಯಾಗಿದೆ.

ಯಾವ ದೇಶದ್ದು ಎಷ್ಟು? : ಏಪ್ರಿಲ್‌-ಜೂನ್‌ ಅವಧಿಯಲ್ಲಿ ಭಾರತ 7.8%, ಚೀನಾ 6.3%, ಇಂಡೋನೇಷ್ಯಾ 5.17%, ರಷ್ಯಾ 4.9%, ಅಮೆರಿಕ 2.1%, ಜಪಾನ್‌ 2%, ದಕ್ಷಿಣ ಕೊರಿಯಾ 0.9%, ಯುಕೆ 0.4%, ಜರ್ಮನಿ -0.2%, ನೆದರ್‌ಲ್ಯಾಂಡ್‌ -0.3% ಜಿಡಿಪಿ ದಾಖಲಿಸಿದೆ.

ಜಿಡಿಪಿ ಎಂದರೇನು?: ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪತ್ತಿಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ವಾಲ್ಯುಯೇಶನ್. ಅಂದ್ರೆ ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಅಂತ ಲೆಕ್ಕ ಹಾಕಲಾಗುತ್ತದೆ.

Advertisement

Source : ಅಂತರ್ಜಾಲ ಮಾಹಿತಿ

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ
May 23, 2025
9:54 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group