Advertisement
ಪ್ರಮುಖ

#GDP | ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಉಳಿದ ಭಾರತ | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ |

Share

2023-24ರ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಭಾರತವು ಶೇ.7.8ರ ಆರ್ಥಿಕ ಬೆಳವಣಿಗೆ ದರವನ್ನು ದಾಖಲಿಸಿದೆ. ಇದರೊಟ್ಟಿಗೆ, ವೇಗವಾಗಿ ಬೆಳೆಯುತ್ತಿರುವ ‘ದೊಡ್ಡ ಆರ್ಥಿಕತೆ’ಯ ದೇಶವಾಗಿ ಮತ್ತೆ ಹೊರಹೊಮ್ಮಿದೆ. ಕೃಷಿ ಮತ್ತು ಹಣಕಾಸು ಕ್ಷೇತ್ರಗಳಲ್ಲಿನ ಉತ್ತಮ ಕಾರ್ಯಕ್ಷಮತೆಯಿಂದಾಗಿ ಜಿಡಿಪಿ ವೃದ್ಧಿಯಾಗಿದೆ.

ಭಾರತ  7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು#China ಹಿಂದಿಕ್ಕಿದೆ. ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ#WorldFastestEconomicGrowth ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

2022-23ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ13.1% ಜಿಡಿಪಿ (GDP) ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 6.1% ರಷ್ಟು ಜಿಡಿಪಿ ದಾಖಲಾಗಿತ್ತು. ಹಣಕಾಸು, ರಿಯಲ್ ಎಸ್ಟೇಟ್ ವಲಯ 12.2% ಬೆಳವಣಿಗೆ ಸಾಧಿಸಿದೆ. ಕೃಷಿ 3.5%, ಉತ್ಪಾದನಾ ವಲಯ 4.7%, ನಿರ್ಮಾಣ 7.9%, ವ್ಯಾಪಾರ ಕ್ಷೇತ್ರ 9.2% ಬೆಳವಣಿಗೆಯಾಗಿದೆ.

ಯಾವ ದೇಶದ್ದು ಎಷ್ಟು? : ಏಪ್ರಿಲ್‌-ಜೂನ್‌ ಅವಧಿಯಲ್ಲಿ ಭಾರತ 7.8%, ಚೀನಾ 6.3%, ಇಂಡೋನೇಷ್ಯಾ 5.17%, ರಷ್ಯಾ 4.9%, ಅಮೆರಿಕ 2.1%, ಜಪಾನ್‌ 2%, ದಕ್ಷಿಣ ಕೊರಿಯಾ 0.9%, ಯುಕೆ 0.4%, ಜರ್ಮನಿ -0.2%, ನೆದರ್‌ಲ್ಯಾಂಡ್‌ -0.3% ಜಿಡಿಪಿ ದಾಖಲಿಸಿದೆ.

ಜಿಡಿಪಿ ಎಂದರೇನು?: ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪತ್ತಿಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ವಾಲ್ಯುಯೇಶನ್. ಅಂದ್ರೆ ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಅಂತ ಲೆಕ್ಕ ಹಾಕಲಾಗುತ್ತದೆ.

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

10 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

15 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago