Advertisement
ಪ್ರಮುಖ

#GDP | ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಉಳಿದ ಭಾರತ | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ |

Share

2023-24ರ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಭಾರತವು ಶೇ.7.8ರ ಆರ್ಥಿಕ ಬೆಳವಣಿಗೆ ದರವನ್ನು ದಾಖಲಿಸಿದೆ. ಇದರೊಟ್ಟಿಗೆ, ವೇಗವಾಗಿ ಬೆಳೆಯುತ್ತಿರುವ ‘ದೊಡ್ಡ ಆರ್ಥಿಕತೆ’ಯ ದೇಶವಾಗಿ ಮತ್ತೆ ಹೊರಹೊಮ್ಮಿದೆ. ಕೃಷಿ ಮತ್ತು ಹಣಕಾಸು ಕ್ಷೇತ್ರಗಳಲ್ಲಿನ ಉತ್ತಮ ಕಾರ್ಯಕ್ಷಮತೆಯಿಂದಾಗಿ ಜಿಡಿಪಿ ವೃದ್ಧಿಯಾಗಿದೆ.

Advertisement
Advertisement

ಭಾರತ  7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು#China ಹಿಂದಿಕ್ಕಿದೆ. ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ#WorldFastestEconomicGrowth ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

2022-23ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ13.1% ಜಿಡಿಪಿ (GDP) ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 6.1% ರಷ್ಟು ಜಿಡಿಪಿ ದಾಖಲಾಗಿತ್ತು. ಹಣಕಾಸು, ರಿಯಲ್ ಎಸ್ಟೇಟ್ ವಲಯ 12.2% ಬೆಳವಣಿಗೆ ಸಾಧಿಸಿದೆ. ಕೃಷಿ 3.5%, ಉತ್ಪಾದನಾ ವಲಯ 4.7%, ನಿರ್ಮಾಣ 7.9%, ವ್ಯಾಪಾರ ಕ್ಷೇತ್ರ 9.2% ಬೆಳವಣಿಗೆಯಾಗಿದೆ.

ಯಾವ ದೇಶದ್ದು ಎಷ್ಟು? : ಏಪ್ರಿಲ್‌-ಜೂನ್‌ ಅವಧಿಯಲ್ಲಿ ಭಾರತ 7.8%, ಚೀನಾ 6.3%, ಇಂಡೋನೇಷ್ಯಾ 5.17%, ರಷ್ಯಾ 4.9%, ಅಮೆರಿಕ 2.1%, ಜಪಾನ್‌ 2%, ದಕ್ಷಿಣ ಕೊರಿಯಾ 0.9%, ಯುಕೆ 0.4%, ಜರ್ಮನಿ -0.2%, ನೆದರ್‌ಲ್ಯಾಂಡ್‌ -0.3% ಜಿಡಿಪಿ ದಾಖಲಿಸಿದೆ.

ಜಿಡಿಪಿ ಎಂದರೇನು?: ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪತ್ತಿಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ವಾಲ್ಯುಯೇಶನ್. ಅಂದ್ರೆ ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಅಂತ ಲೆಕ್ಕ ಹಾಕಲಾಗುತ್ತದೆ.

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

3 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

3 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

3 hours ago