Advertisement
ಪ್ರಮುಖ

#GDP | ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಉಳಿದ ಭಾರತ | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ |

Share

2023-24ರ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಭಾರತವು ಶೇ.7.8ರ ಆರ್ಥಿಕ ಬೆಳವಣಿಗೆ ದರವನ್ನು ದಾಖಲಿಸಿದೆ. ಇದರೊಟ್ಟಿಗೆ, ವೇಗವಾಗಿ ಬೆಳೆಯುತ್ತಿರುವ ‘ದೊಡ್ಡ ಆರ್ಥಿಕತೆ’ಯ ದೇಶವಾಗಿ ಮತ್ತೆ ಹೊರಹೊಮ್ಮಿದೆ. ಕೃಷಿ ಮತ್ತು ಹಣಕಾಸು ಕ್ಷೇತ್ರಗಳಲ್ಲಿನ ಉತ್ತಮ ಕಾರ್ಯಕ್ಷಮತೆಯಿಂದಾಗಿ ಜಿಡಿಪಿ ವೃದ್ಧಿಯಾಗಿದೆ.

ಭಾರತ  7.8% ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ಈ ಬಾರಿಯೂ ಚೀನಾವನ್ನು#China ಹಿಂದಿಕ್ಕಿದೆ. ಕೃಷಿ, ರಿಯಲ್‌ ಎಸ್ಟೇಟ್‌ ಮತ್ತು ಹಣಕಾಸು ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ ಪರಿಣಾಮ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಲ್ಲಿ#WorldFastestEconomicGrowth ಮೊದಲ ಸ್ಥಾನದಲ್ಲೇ ಮುಂದುವರಿದಿದೆ.

2022-23ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ13.1% ಜಿಡಿಪಿ (GDP) ದಾಖಲಾಗಿತ್ತು. ಇದಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. 2023ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ 6.1% ರಷ್ಟು ಜಿಡಿಪಿ ದಾಖಲಾಗಿತ್ತು. ಹಣಕಾಸು, ರಿಯಲ್ ಎಸ್ಟೇಟ್ ವಲಯ 12.2% ಬೆಳವಣಿಗೆ ಸಾಧಿಸಿದೆ. ಕೃಷಿ 3.5%, ಉತ್ಪಾದನಾ ವಲಯ 4.7%, ನಿರ್ಮಾಣ 7.9%, ವ್ಯಾಪಾರ ಕ್ಷೇತ್ರ 9.2% ಬೆಳವಣಿಗೆಯಾಗಿದೆ.

ಯಾವ ದೇಶದ್ದು ಎಷ್ಟು? : ಏಪ್ರಿಲ್‌-ಜೂನ್‌ ಅವಧಿಯಲ್ಲಿ ಭಾರತ 7.8%, ಚೀನಾ 6.3%, ಇಂಡೋನೇಷ್ಯಾ 5.17%, ರಷ್ಯಾ 4.9%, ಅಮೆರಿಕ 2.1%, ಜಪಾನ್‌ 2%, ದಕ್ಷಿಣ ಕೊರಿಯಾ 0.9%, ಯುಕೆ 0.4%, ಜರ್ಮನಿ -0.2%, ನೆದರ್‌ಲ್ಯಾಂಡ್‌ -0.3% ಜಿಡಿಪಿ ದಾಖಲಿಸಿದೆ.

ಜಿಡಿಪಿ ಎಂದರೇನು?: ಜಿಡಿಪಿ ಅಂದರೆ ಗ್ರಾಸ್ ಡೊಮೆಸ್ಟಿಕ್ ಪ್ರೊಡಕ್ಷನ್ ಅಥವಾ ಒಟ್ಟು ರಾಷ್ಟ್ರೀಯ ಉತ್ಪನ್ನ ಅಂತ ಅರ್ಥ. ಅಂದರೆ ಒಂದು ದೇಶದ ಅರ್ಥವ್ಯವಸ್ಥೆಯಲ್ಲಿ ಒಂದು ನಿರ್ದಿಷ್ಟ ಅವಧಿಯಲ್ಲಿ ಉತ್ಪತ್ತಿಯಾಗುವ ಎಲ್ಲಾ ಸರಕು ಮತ್ತು ಸೇವೆಗಳ ಒಟ್ಟು ವಾಲ್ಯುಯೇಶನ್. ಅಂದ್ರೆ ಕೃಷಿ ಉತ್ಪನ್ನ, ಕೈಗಾರಿಕಾ ಉತ್ಪನ್ನ, ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿನ ವಹಿವಾಟು, ಜನರ ಸಂಬಳ, ಆಮದು ರಫ್ತು ಎಲ್ಲವೂ ಸೇರಿ ಲೆಕ್ಕ ಹಾಕಿದಾಗ ಜಿಡಿಪಿ ಎಷ್ಟು ಅಂತ ಲೆಕ್ಕ ಹಾಕಲಾಗುತ್ತದೆ.

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

22 minutes ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

32 minutes ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

8 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

8 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago