Advertisement
ವಿಶೇಷ ವರದಿಗಳು

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ

Share

ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ಭಾರತದಲ್ಲಿ ಭತ್ತದ ಉತ್ಪಾದನೆ ಮೇಲೆ ಹಿಂದೆ ಅಂದಾಜಿಸಿದ್ದಕ್ಕಿಂತಲೂ ಹೆಚ್ಚು ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೊಸ ಅಧ್ಯಯನವೊಂದು ಎಚ್ಚರಿಸಿದೆ. ಜಾಗತಿಕ ಸರಾಸರಿ ತಾಪಮಾನವು ಪ್ರತಿ 1 ಡಿಗ್ರಿ ಸೆಲ್ಸಿಯಸ್ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು ಕುಸಿಯಬಹುದು ಎಂದು ಅಧ್ಯಯನ ತಿಳಿಸಿದೆ. ಈ ಅಂದಾಜು ಹಿಂದಿನ ಮುನ್ಸೂಚನೆಗಳಿಗಿಂತ ಮೂರು ಪಟ್ಟು ಹೆಚ್ಚಾಗಿದೆ.

ಈ ಸಂಶೋಧನೆಯನ್ನು Science Advances ಜರ್ನಲ್‌ನಲ್ಲಿ ಪ್ರಕಟಿಸಲಾಗಿದ್ದು, ಜರ್ಮನಿಯ Helmholtz Centre for Environmental Research ನೇತೃತ್ವದಲ್ಲಿ, Potsdam Institute for Climate Impact Research ಸಹಯೋಗದಲ್ಲಿ ನಡೆಸಲಾಗಿದೆ. ವಿಶ್ವದ ವಿವಿಧ ಭತ್ತ ಬೆಳೆ ಪ್ರದೇಶಗಳ 214 ಕ್ಷೇತ್ರಗಳ  ಮಾಹಿತಿಯನ್ನು ಏಳು ಪ್ರಮುಖ ಬೆಳೆ ಮಾದರಿಗಳೊಂದಿಗೆ ಹೋಲಿಸಿ ವಿಶ್ಲೇಷಿಸಲಾಗಿದೆ.

30°C ದಾಟಿದರೆ ಅಪಾಯ ಹೆಚ್ಚಳ :  ಅಧ್ಯಯನದ ಪ್ರಕಾರ, 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ಉಷ್ಣಾಂಶ ಭತ್ತದ ಇಳುವರಿ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಭತ್ತದಲ್ಲಿ ಹೂ ಬಿಡುವ ಹಾಗೂ ಕಾಳು ತುಂಬುವ ಹಂತದಲ್ಲಿ ಅಧಿಕ ಉಷ್ಣಾಂಶ ಎದುರಾದರೆ ಉತ್ಪಾದನೆಗೆ ತೀವ್ರ ಹಾನಿಯಾಗುತ್ತದೆ. ಅಧ್ಯಯನದಲ್ಲಿ ಒಳಗೊಂಡಿದ್ದ ಶೇ.70ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹೆಚ್ಚಿನ ಉಷ್ಣಾಂಶವೇ ಇಳುವರಿ ನಷ್ಟದ ಪ್ರಮುಖ ಕಾರಣ ಎಂದು ಕಂಡುಬಂದಿದೆ.

ಭಾರತ ಸೇರಿದಂತೆ ದಕ್ಷಿಣ ಏಷ್ಯಾಕ್ಕೆ ಹೆಚ್ಚು ಹೊಡೆತ :  ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಭತ್ತದ ಇಳುವರಿ ಕುಸಿತದ ಅಂದಾಜು ಶೇ.2.1ರಿಂದ ಶೇ.6.6ಕ್ಕೆ ಏರಿಕೆಯಾಗಿದೆ. ಥೈಲೆಂಡ್, ಫಿಲಿಪ್ಪೀನ್ಸ್ ಮತ್ತು ಮ್ಯಾನ್ಮಾರ್‌ನಲ್ಲಿ ಈ ಅಂದಾಜು ಶೇ.3.7 ರಿಂದ ಶೇ.7.7ಕ್ಕೆ  ಹೆಚ್ಚಾಗಿದೆ. ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ದೇಶಗಳು ಹೆಚ್ಚು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ಹೇಳಿದೆ.

ಕಂಪ್ಯೂಟರ್ ಮಾದರಿಗಳಿಗಿಂತ ನೈಜ ಹೊಲದ ಅಂಕಿಅಂಶಗಳು ಭಿನ್ನ : ಹಿಂದಿನ ಬೆಳೆ ಮಾದರಿಗಳು ಪ್ರತಿ 1 ಡಿಗ್ರಿ ತಾಪಮಾನ ಏರಿಕೆಗೆ ಭತ್ತದ ಇಳುವರಿ ಶೇ.3.8 ರಷ್ಟು ಮಾತ್ರ ಕಡಿಮೆಯಾಗುತ್ತದೆ ಎಂದು ಅಂದಾಜಿಸಿದ್ದರೆ, ಈಗ ಹೊಲದ ಅಧ್ಯಯನಗಳಲ್ಲಿ ಶೇ.8.1 ರಷ್ಟು ನಷ್ಟ ದಾಖಲಾಗಿದೆ. ಇದರಿಂದ ಪ್ರಸ್ತುತ ಬಳಸಲಾಗುತ್ತಿರುವ ಹಲವು ಬೆಳೆ ಮಾದರಿಗಳು ಭತ್ತದ ಸೂಕ್ಷ್ಮ ಬೆಳವಣಿಗೆಯ ಹಂತಗಳಲ್ಲಿ ಉಷ್ಣದ ಪರಿಣಾಮವನ್ನು ಸಂಪೂರ್ಣವಾಗಿ ಅಳೆಯುತ್ತಿಲ್ಲ ಎಂಬುದು ಸಂಶೋಧಕರ ಅಭಿಪ್ರಾಯವಾಗಿದೆ.

ಭತ್ತವು ಭಾರತದ ಸುಮಾರು ಮೂರರಲ್ಲಿ ಎರಡು ಭಾಗದ ಜನರ ಪ್ರಮುಖ ಆಹಾರವಾಗಿದೆ. ಹೀಗಾಗಿ ಜಾಗತಿಕ ತಾಪಮಾನ ಏರಿಕೆಯು ಭತ್ತದ ಉತ್ಪಾದನೆಯನ್ನು ಕಡಿಮೆ ಮಾಡಿದರೆ ಆಹಾರ ಭದ್ರತೆ, ರೈತರ ಆದಾಯ ಮತ್ತು ಕೃಷಿ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಧ್ಯಯನ ಎಚ್ಚರಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A new study published in Science Advances warns that India’s rice yield could decline by 6.6% for every 1°C rise in global temperature, more than three times higher than earlier estimates. The research found that temperatures above 30°C, especially during flowering and grain formation, significantly reduce rice productivity.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago