Advertisement
ಸುದ್ದಿಗಳು

ರಬ್ಬರ್ ಆಮದು ಸುಂಕ | ರಬ್ಬರ್‌ ಬೆಳೆಗಾರರಿಗೆ ಪ್ರಯೋಜನವಿಲ್ಲ ಎಂದು ಬೆಳೆಗಾರರ ಸಂಘ |

Share

ರಬ್ಬರ್‌ ಆಮದು ಸುಂಕ ಏರಿಕೆ ಮಾಡಿದ ಬಳಿಕವೂ ರಬ್ಬರ್‌ ಧಾರಣೆಯಲ್ಲಿ ಯಾವುದೇ ಏರಿಕೆ ಕಾಣುವುದಿಲ್ಲ, ಇದರಿಂದ ರಬ್ಬರ್‌ ಬೆಳೆಗಾರರಿಗೆ ಯಾವುದೇ ಪ್ರಯೋಜನವಾಗದು ಎಂದು ರಬ್ಬರ್‌ ಬೆಳೆಗಾರರ ಸಂಘವು ಹೇಳಿದೆ. ಆದರೆ ರಬ್ಬರ್‌ ಆಮದು ಸುಂಕ ಏರಿಕೆಯು ರಬ್ಬರ್‌ ಧಾರಣೆಯ ಮೇಲೆ ಪ್ರಯೋಜನವಾಗುತ್ತದೆ ಎಂದು ರಬ್ಬರ್ ಮಂಡಳಿಯ  ಆಮದು ಸುಂಕ ಕ್ರಮವನ್ನು ಸಮರ್ಥಿಸಿಕೊಂಡಿದೆ.

ರಬ್ಬರ್ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಭಾರತ ಸರ್ಕಾರದ ಇತ್ತೀಚಿನ ಕ್ರಮವು ರಬ್ಬರ್ ಬೆಳೆಗಾರರಿಗೆ ಪ್ರಯೋಜನವಾಗುವುದಿಲ್ಲ ಎನ್ನುವ ಚರ್ಚೆ ಈಗ ಆರಂಭವಾಗಿದೆ. ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಯಲ್ಲಿ ಭಾಗಿಯಾಗಿರುವ ಆಸಿಯಾನ್ ದೇಶಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಬೆಳೆಗಾರರ ​​ಸಂಘವು ಹೈಲೈಟ್ ಮಾಡಿದೆ.

ಭಾರತದ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್  ಆಮದು ಸುಂಕವನ್ನು 25% ಅಥವಾ ಪ್ರತಿ ಕೆಜಿಗೆ ರೂ 30 ಕ್ಕೆ ನಿಗದಿಪಡಿಸಿದೆ. ಯಾವುದು ಕಡಿಮೆಯೋ ಅದು. ನೈಸರ್ಗಿಕ ರಬ್ಬರ್‌ ಧಾರಣೆ ಸಮಾನಾಗಿರಲು ಸಂಯುಕ್ತ ರಬ್ಬರ್ ಮೇಲಿನ ಆಮದು ಸುಂಕವನ್ನು 10% ರಿಂದ ಹೆಚ್ಚಿಸಲಾಗಿದೆ. ಆದರೆ ಈಚೆಗೆ  ಸಂಯುಕ್ತ ರಬ್ಬರ್ ಆಮದುಗಳ ತೀವ್ರ ಹೆಚ್ಚಳಕ್ಕೆ ಕಾರಣವಾಗುತ್ತಿದೆ.- 2017 ರಲ್ಲಿ18 ರಲ್ಲಿ 57,000 ಟನ್‌ ಆಮದಾಗಿದ್ದರೆ 2021-22 ರಲ್ಲಿ 114,000 ಟನ್‌ಗಳಿಗೆ ತಲಪಿದೆ.

ಇದೀಗ ಈ ಸುಂಕವನ್ನು ತಪ್ಪಿಸಲು ಸಂಯುಕ್ತ ರಬ್ಬರ್‌ನ ಹೆಸರಿನಲ್ಲಿ ಸಂಯುಕ್ತ ರಬ್ಬರ್ ಅನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಅನುಮಾನವನ್ನು ವ್ಯಕ್ತವಾಗಿದೆ.  ವ್ಯಾಪಾರ ಒಪ್ಪಂದಗಳ ಮೂಲಕ ಇತರ ರಾಷ್ಟ್ರಗಳಿಗೆ ಒದಗಿಸಲಾದ ರಿಯಾಯಿತಿಗಳ ಬಳಕೆ ಈ ರೀತಿ ಆಗುತ್ತಿದೆಯೇ ಎನ್ನುವುದು  ಅನುಮಾನಗಳಲ್ಲಿ ಒಂದು. ಹೀಗಾಗಿ ಆಮದು ಸುಂಕ ಏರಿಕೆಯ ನಂತರವೂ ಭಾರತದಲ್ಲಿ ರಬ್ಬರ್‌ ಧಾರಣೆ ಏರಿಕೆ ಕಾಣುತ್ತಿಲ್ಲ. ಪ್ರಸ್ತುತ, ಸಂಯುಕ್ತ ರಬ್ಬರ್‌ನ ಆಮದುಗಳಲ್ಲಿ ಸುಮಾರು 55% ಆಸಿಯಾನ್ ದೇಶಗಳಿಂದ ಆಗಿದ್ದರೆ, ಉಳಿದ 45% ಯುಎಸ್, ಜರ್ಮನಿ, ದಕ್ಷಿಣ ಕೊರಿಯಾ, ಇಟಲಿ, ಫ್ರಾನ್ಸ್ ಮತ್ತು ಯುಕೆ ದೇಶಗಳಿಂದ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

9 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

22 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

23 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

23 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago