Advertisement
ಸುದ್ದಿಗಳು

ರಬ್ಬರ್ ಆಮದು ಸುಂಕ | ರಬ್ಬರ್‌ ಬೆಳೆಗಾರರಿಗೆ ಪ್ರಯೋಜನವಿಲ್ಲ ಎಂದು ಬೆಳೆಗಾರರ ಸಂಘ |

Share

ರಬ್ಬರ್‌ ಆಮದು ಸುಂಕ ಏರಿಕೆ ಮಾಡಿದ ಬಳಿಕವೂ ರಬ್ಬರ್‌ ಧಾರಣೆಯಲ್ಲಿ ಯಾವುದೇ ಏರಿಕೆ ಕಾಣುವುದಿಲ್ಲ, ಇದರಿಂದ ರಬ್ಬರ್‌ ಬೆಳೆಗಾರರಿಗೆ ಯಾವುದೇ ಪ್ರಯೋಜನವಾಗದು ಎಂದು ರಬ್ಬರ್‌ ಬೆಳೆಗಾರರ ಸಂಘವು ಹೇಳಿದೆ. ಆದರೆ ರಬ್ಬರ್‌ ಆಮದು ಸುಂಕ ಏರಿಕೆಯು ರಬ್ಬರ್‌ ಧಾರಣೆಯ ಮೇಲೆ ಪ್ರಯೋಜನವಾಗುತ್ತದೆ ಎಂದು ರಬ್ಬರ್ ಮಂಡಳಿಯ  ಆಮದು ಸುಂಕ ಕ್ರಮವನ್ನು ಸಮರ್ಥಿಸಿಕೊಂಡಿದೆ.

ರಬ್ಬರ್ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಭಾರತ ಸರ್ಕಾರದ ಇತ್ತೀಚಿನ ಕ್ರಮವು ರಬ್ಬರ್ ಬೆಳೆಗಾರರಿಗೆ ಪ್ರಯೋಜನವಾಗುವುದಿಲ್ಲ ಎನ್ನುವ ಚರ್ಚೆ ಈಗ ಆರಂಭವಾಗಿದೆ. ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಯಲ್ಲಿ ಭಾಗಿಯಾಗಿರುವ ಆಸಿಯಾನ್ ದೇಶಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಬೆಳೆಗಾರರ ​​ಸಂಘವು ಹೈಲೈಟ್ ಮಾಡಿದೆ.

ಭಾರತದ ಕೇಂದ್ರ ಸರ್ಕಾರವು ನೈಸರ್ಗಿಕ ರಬ್ಬರ್  ಆಮದು ಸುಂಕವನ್ನು 25% ಅಥವಾ ಪ್ರತಿ ಕೆಜಿಗೆ ರೂ 30 ಕ್ಕೆ ನಿಗದಿಪಡಿಸಿದೆ. ಯಾವುದು ಕಡಿಮೆಯೋ ಅದು. ನೈಸರ್ಗಿಕ ರಬ್ಬರ್‌ ಧಾರಣೆ ಸಮಾನಾಗಿರಲು ಸಂಯುಕ್ತ ರಬ್ಬರ್ ಮೇಲಿನ ಆಮದು ಸುಂಕವನ್ನು 10% ರಿಂದ ಹೆಚ್ಚಿಸಲಾಗಿದೆ. ಆದರೆ ಈಚೆಗೆ  ಸಂಯುಕ್ತ ರಬ್ಬರ್ ಆಮದುಗಳ ತೀವ್ರ ಹೆಚ್ಚಳಕ್ಕೆ ಕಾರಣವಾಗುತ್ತಿದೆ.- 2017 ರಲ್ಲಿ18 ರಲ್ಲಿ 57,000 ಟನ್‌ ಆಮದಾಗಿದ್ದರೆ 2021-22 ರಲ್ಲಿ 114,000 ಟನ್‌ಗಳಿಗೆ ತಲಪಿದೆ.

ಇದೀಗ ಈ ಸುಂಕವನ್ನು ತಪ್ಪಿಸಲು ಸಂಯುಕ್ತ ರಬ್ಬರ್‌ನ ಹೆಸರಿನಲ್ಲಿ ಸಂಯುಕ್ತ ರಬ್ಬರ್ ಅನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಅನುಮಾನವನ್ನು ವ್ಯಕ್ತವಾಗಿದೆ.  ವ್ಯಾಪಾರ ಒಪ್ಪಂದಗಳ ಮೂಲಕ ಇತರ ರಾಷ್ಟ್ರಗಳಿಗೆ ಒದಗಿಸಲಾದ ರಿಯಾಯಿತಿಗಳ ಬಳಕೆ ಈ ರೀತಿ ಆಗುತ್ತಿದೆಯೇ ಎನ್ನುವುದು  ಅನುಮಾನಗಳಲ್ಲಿ ಒಂದು. ಹೀಗಾಗಿ ಆಮದು ಸುಂಕ ಏರಿಕೆಯ ನಂತರವೂ ಭಾರತದಲ್ಲಿ ರಬ್ಬರ್‌ ಧಾರಣೆ ಏರಿಕೆ ಕಾಣುತ್ತಿಲ್ಲ. ಪ್ರಸ್ತುತ, ಸಂಯುಕ್ತ ರಬ್ಬರ್‌ನ ಆಮದುಗಳಲ್ಲಿ ಸುಮಾರು 55% ಆಸಿಯಾನ್ ದೇಶಗಳಿಂದ ಆಗಿದ್ದರೆ, ಉಳಿದ 45% ಯುಎಸ್, ಜರ್ಮನಿ, ದಕ್ಷಿಣ ಕೊರಿಯಾ, ಇಟಲಿ, ಫ್ರಾನ್ಸ್ ಮತ್ತು ಯುಕೆ ದೇಶಗಳಿಂದ ಆಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

9 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

10 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

17 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

23 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

23 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago