Advertisement
The Rural Mirror ವಾರದ ವಿಶೇಷ

ಭಾರತವು ಅಪಾಯಕಾರಿ ಕಳೆನಾಶಕ ಏಕೆ ನಿಷೇಧಿಸಬೇಕು ? | ಡೌನ್‌ ಟು ಅರ್ಥ್‌ ವಿಶೇಷ ವರದಿಯಲ್ಲಿ ಹೇಳಿದೆ |

Share

ಗ್ಲೈಫೋಸೇಟ್ ಸಸ್ಯನಾಶಕ ಮತ್ತು ಅದರ ಉತ್ಪನ್ನಗಳ ಬಳಕೆಗೆ ಇತ್ತೀಚೆಗೆ ಕೇಂದ್ರ ಸರ್ಕಾರವು ಈಚೆಗೆ ನಿರ್ಬಂಧ ಹೇರಿದೆ. ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳುಂಟಾಗಬಹುದು, ಮನುಷ್ಯರು ಹಾಗೂ ಪ್ರಾಣಿಗಳಿಗೆ ಅಪಾಯವುಂಟಾಗಬಹುದು ಎಂಬ ಭೀತಿಯಿಂದ ಸರ್ಕಾರ ಈ ನಿರ್ಬಂಧ ಹೇರಿದೆ. ಆದರೆ ಇದನ್ನು ಜಾಗತಿಕ ಅಧ್ಯಯನಗಳು ಮತ್ತು ನಿಯಂತ್ರಕ ಸಂಸ್ಥೆಗಳ ಅನುಮೋದನೆಗಳನ್ನು ಉಲ್ಲೇಖಿಸಿ ಉದ್ಯಮ ಸಂಘ, ಆಗ್ರೋ-ಕೆಮಿಕಲ್ ಫೆಡರೇಶನ್ ಆಫ್ ಇಂಡಿಯಾ(AGFI) ವಿರೋಧಿಸಿದೆ.

ಗ್ಲೈಫೋಸೇಟ್ ಮತ್ತು ಅದರ ಸಂಯೋಜನೆಗಳನ್ನು ವ್ಯಾಪಕವಾಗಿ ನೋಂದಾಯಿಸಲಾಗಿದ್ದು, ಪ್ರಸ್ತುತ ಐರೋಪ್ಯ ಒಕ್ಕೂಟ ಮತ್ತು ಅಮೆರಿಕ ಸೇರಿದಂತೆ 160ಕ್ಕೂ ಹೆಚ್ಚು ದೇಶಗಳಲ್ಲಿ ಬಳಸಲಾಗುತ್ತಿದೆ. ಜಗತ್ತಿನಾದ್ಯಂತ ರೈತರು ಕಳೆದ 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ಸುರಕ್ಷಿತ ಮತ್ತು ಪರಿಣಾಮಕಾರಿ ಕಳೆ ನಿಯಂತ್ರಕವಾಗಿ ರೈತರು ಬಳಸುತ್ತಿದ್ದಾರೆ.
ಗ್ಲೈಫೋಸೇಟ್ ಬಳಕೆಯನ್ನು ನಿರ್ಬಂಧಿಸಲಾಗಿದ್ದು, ಕೀಟ ನಿಯಂತ್ರಣ ನಿರ್ವಾಹಕರನ್ನು (PCOs) ಹೊರತುಪಡಿಸಿ ಬೇರೆ ಯಾರೂ ಗ್ಲೈಫೋಸೇಟ್ ಬಳಸಬಾರದು ಎಂದು ಕೃಷಿ ಸಚಿವಾಲಯವು  ಅಕ್ಟೋಬರ್ 25 ರಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಆದರೆ ಡೌನ್‌ ಟು ಅರ್ಥ್‌ ತನ್ನ ವಿಶೇಷ ವರದಿಯಲ್ಲಿ  ಉಲ್ಲೇಖಿಸಿದೆ,  ಭಾರತವು ಅಪಾಯಕಾರಿ ಕಳೆನಾಶಕ ಗ್ಲೈಫೋಸೇಟ್ ಬಳಕೆಯನ್ನು ನಿರ್ಬಂಧಿಸದೆ  ನಿಷೇಧಿಸಬೇಕು ಏಕೆ ಎಂದು ವಿವರಿಸಿದೆ. ಡೌನ್‌ ಟು ಅರ್ಥ್‌ ಪರಿಸರ ಪರವಾಗಿ, ಕೃಷಿ ಪರವಾಗಿ ಧ್ವನಿ ಎತ್ತುತ್ತಿರುವ ಪತ್ರಿಕೆಯಾಗಿದೆ. ಈ ಹಿಂದೆ ಎಂಡೋಸಲ್ಫಾನ್‌ ಬಗ್ಗೆ ಸಮಗ್ರವಾದ ವರದಿ ಪ್ರಕಟ ಮಾಡಿತ್ತು.

ಕೀಟನಾಶಕ ಕಾಯಿದೆ, 1968 ರ ಅಡಿಯಲ್ಲಿ ಸ್ಥಾಪಿಸಲಾದ ತಜ್ಞರ ಸಮಿತಿಯ ವರದಿ ಮತ್ತು ನೋಂದಣಿ ಸಮಿತಿಯೊಂದಿಗೆ ಸಮಾಲೋಚಿಸಿದ ನಂತರ ಗ್ಲೈಫೋಸೇಟ್ ಬಳಕೆಯನ್ನು ನಿರ್ಬಂಧಿಸಿದೆ. ಭಾರತದಲ್ಲಿ ಸುಮಾರು 35 ಬ್ರಾಂಡ್‌ಗಳ ಗ್ಲೈಫೋಸೇಟ್ ಲಭ್ಯವಿದೆ ಎಂದು ಕೀಟನಾಶಕ ಆಕ್ಷನ್ ನೆಟ್‌ವರ್ಕ್ ವರದಿ ಹೇಳಿದೆ.

ಭಾರತದಲ್ಲಿ, ಕಳೆಗಳ ನಿಯಂತ್ರಣಕ್ಕಾಗಿ ಗ್ಲೈಫೋಸೇಟ್ ಬಳಕೆಯನ್ನು ಚಹಾ ಬೆಳೆ ಮತ್ತು ಬೆಳೆಯೇತರ ಪ್ರದೇಶಗಳಿಗೆ ಮಾತ್ರ ಅನುಮೋದಿಸಲಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ಭಾರತದ ಪ್ರಮುಖ ಚಹಾ ತೋಟದ ರಾಜ್ಯಗಳಾಗಿವೆ. ಆದರೆ  ಚಹಾ ಬೆಳೆಗಳನ್ನು ಹೊಂದಿರದ ರಾಜ್ಯಗಳಲ್ಲಿ ಬಳಕೆ ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತೋರಿಸಿವೆ. ಉದಾಹರಣೆಗೆ, 2020-21ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಗ್ಲೈಫೋಸೇಟ್  ಬಳಕೆಯು ಉತ್ತರ ಪ್ರದೇಶದಲ್ಲಿ ಬಳಕೆಯಾಗಿದೆ. ನಂತರ ಗುಜರಾತ್ , ಜಮ್ಮು ಮತ್ತು ಕಾಶ್ಮೀರ , ತಮಿಳುನಾಡು. ಅಸ್ಸಾಂ , ಮಧ್ಯಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಬಳಕೆ ಇದೆ.

ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದ ರೈತರು 2017 ರಲ್ಲಿ ಪ್ಯಾನ್ ಇಂಡಿಯಾದ ಕ್ಷೇತ್ರ ಅಧ್ಯಯನದ ಸಮಯದಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರ ಬೆಳೆಗಳಲ್ಲಿ ಅದರಲ್ಲೂ ಮುಖ್ಯವಾಗಿ 16 ಆಹಾರ ಬೆಳೆಗಳಲ್ಲಿ ಗ್ಲೈಫೋಸೇಟ್ ಅನ್ನು ಅಕ್ರಮವಾಗಿ ಬಳಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಕೇರಳ ಸರ್ಕಾರವು ಜೂನ್ 20, 2019 ರಂದು ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದಲ್ಲಿ ಗ್ಲೈಫೋಸೇಟ್ (ಕಳೆನಾಶಕ) ಅನ್ನು ರೈತರು ಭತ್ತದ ಗದ್ದೆಗಳಲ್ಲಿ ವ್ಯಾಪಕವಾಗಿ ಮತ್ತು ವಿವೇಚನೆಯಿಲ್ಲದೆ ಬಳಸುತ್ತಿರುವ ಬಗ್ಗೆ ವರದಿ ಮಾಡಿದೆ. ಹಣ್ಣುಗಳು ಮತ್ತು ತರಕಾರಿಗಳಲ್ಲಿ ಹೆಚ್ಚಿನ ಕೀಟನಾಶಕಗಳು ತೋರಿಸುತ್ತವೆ ಎಂದೂ ಕೇರಳದ ಕೃಷಿ ವಿಶ್ವವಿದ್ಯಾಲಯದ ಅಧ್ಯಯನ ವರದಿಯನ್ನು ಉಲ್ಲೇಖಿಸಿದೆ.

ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ ಎನ್ನುವ ಸಂಸ್ಥೆ 2015 ರಲ್ಲಿ ಗ್ಲೈಫೋಸೇಟ್ ಕಾರ್ಸಿನೋಜೆನಿಕ್‌ ಎಂದು ಹೇಳಿದೆ. ಯುರೋಪಿಯನ್ ಕೆಮಿಕಲ್ ಏಜೆನ್ಸಿಯು ಗ್ಲೈಫೋಸೇಟ್ ಕಣ್ಣುಗಳಿಗೆ  ಹಾನಿಯನ್ನುಂಟು ಮಾಡುತ್ತದೆ ಎಂದು ಕಂಡುಹಿಡಿದಿದೆ. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಡೆಸಿದ ಅಧ್ಯಯನವು ಪಿಟ್ಯುಟರಿ ಗ್ರಂಥಿಯ ಕಾರ್ಯನಿರ್ವಹಣೆಯಲ್ಲಿ ಗ್ಲೈಫೋಸೇಟ್‌ಗೆ ಅಡ್ಡಿಪಡಿಸುತ್ತದೆ ಎಂದು ವರದಿಯಲ್ಲಿ ಹೇಳಿದೆ.

ಈಗಾಗಲೇ ಸುಮಾರು 35 ಕ್ಕೂ ಹೆಚ್ಚು ದೇಶಗಳಲ್ಲಿ ಗ್ಲೈಫೋಸೇಟ್ ಅನ್ನು ನಿಷೇಧಿಸಲಾಗಿದೆ. ಇವುಗಳಲ್ಲಿ ಶ್ರೀಲಂಕಾ, ನೆದರ್ಲ್ಯಾಂಡ್ಸ್, ಫ್ರಾನ್ಸ್, ಕೊಲಂಬಿಯಾ, ಕೆನಡಾ, ಇಸ್ರೇಲ್ ಮತ್ತು ಅರ್ಜೆಂಟೀನಾ ಮತ್ತು ಆರು ಭಾರತೀಯ ರಾಜ್ಯಗಳು ಸೇರಿವೆ.

ಆದರೆ ಭಾರತವು ಈಗ ಕೀಟ ನಿಯಂತ್ರಣ ನಿರ್ವಾಹಕರನ್ನು ಹೊರತುಪಡಿಸಿ ಯಾವುದೇ ವ್ಯಕ್ತಿ ಗ್ಲೈಫೋಸೇಟ್ ಬಳಸಬಾರದು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.  ಆದರೆ, ಆ ಕೀಟ ನಿಯಂತ್ರಣ ನಿರ್ವಾಹಕರು ಯಾರು ಮತ್ತು ಈ ನಿಯಮವನ್ನು ಕಾರ್ಯಗತಗೊಳಿಸುವ ವಿಧಾನ ಏನು ಎಂಬುದು ಸ್ಪಷ್ಟವಾಗಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

4 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

5 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

13 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

20 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago