ಭಾರತದಲ್ಲಿ ತಾಳೆ ಎಣ್ಣೆ, ಚಿನ್ನದ ಮೂಲ ಆಮದು ಬೆಲೆ ಕಡಿತ | ಅಡುಗೆ ಎಣ್ಣೆ ದರ ಇಳಿಕೆಯಾಗುವ ಸಾಧ್ಯತೆ |

October 3, 2022
8:11 PM

ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.

2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.

ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ.  ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror