ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.
2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.
ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ. ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…