Advertisement
ರಾಷ್ಟ್ರೀಯ

ಭಾರತದಲ್ಲಿ ತಾಳೆ ಎಣ್ಣೆ, ಚಿನ್ನದ ಮೂಲ ಆಮದು ಬೆಲೆ ಕಡಿತ | ಅಡುಗೆ ಎಣ್ಣೆ ದರ ಇಳಿಕೆಯಾಗುವ ಸಾಧ್ಯತೆ |

Share

ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.

Advertisement
Advertisement
Advertisement
Advertisement

2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.

Advertisement

ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ.  ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

7 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

7 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

7 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

7 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

7 hours ago

ಅಡಿಕೆ ಒಂದು ಸಮೂಹದ ಅನಿವಾರ್ಯತೆ ಮತ್ತು ಬದುಕು

ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…

21 hours ago