ರಾಷ್ಟ್ರೀಯ

ಭಾರತದಲ್ಲಿ ತಾಳೆ ಎಣ್ಣೆ, ಚಿನ್ನದ ಮೂಲ ಆಮದು ಬೆಲೆ ಕಡಿತ | ಅಡುಗೆ ಎಣ್ಣೆ ದರ ಇಳಿಕೆಯಾಗುವ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತವು ಕಚ್ಚಾ ಮತ್ತು ಸಂಸ್ಕರಿಸಿದ ಪಾಮ್ ಆಯಿಲ್, ಕಚ್ಚಾ ಸೋಯಾ ತೈಲ ಮತ್ತು ಚಿನ್ನದ ಮೂಲ ಆಮದು ಬೆಲೆಗಳನ್ನು ಕಡಿತಗೊಳಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಹೀಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಲಿದೆ.

2023 ರ ಮಾರ್ಚ್ 31 ರವರೆಗೆ ಅಡುಗೆ ಎಣ್ಣೆ ಮೇಲಿನ ಅಮದು ಸುಂಕಕ್ಕೆ ನೀಡಿರುವ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸಚಿವಾಲಯ ತಿಳಿಸಿದೆ.ಈ ನಿಯಮದಿಂದಾಗಿ ಕಚ್ಚಾ ತಾಳೆ, ಕಚ್ಚಾ ಸೋಯಾ, ಕಚ್ಚಾ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾ ಎಣ್ಣೆಗಳ ಮೇಲೆ ಯಾವುದೇ ಆಮದು ಸುಂಕ ಇರುವುದಿಲ್ಲ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಯಾಗಲಿದೆ.

ಸರ್ಕಾರವು ಪ್ರತಿ ಹದಿನೈದು ದಿನಗಳಿಗೊಮ್ಮೆ ಖಾದ್ಯ ತೈಲಗಳು, ಚಿನ್ನ ಮತ್ತು ಬೆಳ್ಳಿಯ ಮೂಲ ಆಮದು ಬೆಲೆಗಳನ್ನು ಪರಿಷ್ಕರಿಸುತ್ತದೆ. ಭಾರತವು ಖಾದ್ಯ ತೈಲಗಳು ಮತ್ತು ಬೆಳ್ಳಿಯ ವಿಶ್ವದ ಅತಿದೊಡ್ಡ ಆಮದುದಾರ ಮತ್ತು ಚಿನ್ನದ ಎರಡನೇ ಅತಿ ದೊಡ್ಡ ಗ್ರಾಹಕ.  ಭಾರತದಲ್ಲಿ ಚಿನ್ನ, ಖಾದ್ಯ ತೈಲಗಳ ಬೆಲೆಯ ಮೇಲೆ ಈ ಆಮದು ದರವು ಪರಿಣಾಮ ಬೀರುತ್ತದೆ. ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇನ್ನು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಖಾದ್ಯ ತೈಲ ದರವು ಇತ್ತೀಚೆಗೆ ಜಾಗತಿಕವಾಗಿ ಕೊಂಚ ಇಳಿಕೆಯಾಗುತ್ತಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 minute ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

34 minutes ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

40 minutes ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

17 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

17 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

17 hours ago